ಓದುಗರ ಪತ್ರ
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯುಸಿಎಂಎಸ್ (ಯುನೈಟೆಡ್ ಯುನಿವರ್ಸಿಟಿ ಮತ್ತು ಕಾಲೇಜು ನಿರ್ವಹಣೆ) ಯೋಜನೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ.
ಆದರೆ, ಈ ಯೋಜನೆ ಜಾರಿಯಾದಾಗಿನಿಂದ ಇದರಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೆ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೇಲೆ ನಿರುತ್ಸಾಹ ಮೂಡಿದೆ. ಈ ತಂತ್ರಾಂಶಕ್ಕೆ ವಿದ್ಯಾರ್ಥಿಗಳ ದತ್ತಾಂಶಗಳನ್ನು ಅಪ್ಲೋಡ್ ಮಾಡಲು ಅನೇಕ ಸಮಸ್ಯೆಗಳು ಎದುರಾಗಿದ್ದು, ಸರಿಯಾಗಿ ಅಪ್ಲೋಡ್ ಆಗುತ್ತಿಲ್ಲ. ಇದರ ಜತೆಗೆ ಸರ್ವರ್ ಸಮಸ್ಯೆಯೂ ಕಾಡುತ್ತಿದ್ದು, ವಿದ್ಯಾರ್ಥಿ ಗಳು ತರಗತಿಗಳಿಗಿಂತ ಡೇಟಾ ಎಂಟ್ರಿ ಮಾಡುವಲ್ಲಿಯೇ ಹೆಚ್ಚು ಸಮಯ ಕಳೆಯುವಂತಾಗಿದೆ. ಈ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಸಂಬಂಧಪಟ್ಟ ವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಾಂತ್ರಿಕ ದೋಷದಿಂದಾಗಿ ವಿದ್ಯಾರ್ಥಿಗಳು ಶುಲ್ಕದ ಜತೆಗೆ ದಂಡವನ್ನೂ ಪಾವತಿಸುವಂತಾಗಿದೆ. ಜತೆಗೆ ಪದವಿ ವಿದ್ಯಾರ್ಥಿಗಳಿಗೆ ಫಲಿತಾಂಶ ತಡವಾಗುತ್ತಿದ್ದು, ಉನ್ನತ ಶಿಕ್ಷಣಕ್ಕೆ ತಡೆಯಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ತಂತ್ರಾಂಶದಲ್ಲಿನ ದೋಷವನ್ನು ಸರಿಪಡಿಸಬೇಕಿದೆ.
-ಕೀರ್ತನ ಕುಶಾಲಪ್ಪ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…