ಓದುಗರ ಪತ್ರ
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯುಸಿಎಂಎಸ್ (ಯುನೈಟೆಡ್ ಯುನಿವರ್ಸಿಟಿ ಮತ್ತು ಕಾಲೇಜು ನಿರ್ವಹಣೆ) ಯೋಜನೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ.
ಆದರೆ, ಈ ಯೋಜನೆ ಜಾರಿಯಾದಾಗಿನಿಂದ ಇದರಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೆ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೇಲೆ ನಿರುತ್ಸಾಹ ಮೂಡಿದೆ. ಈ ತಂತ್ರಾಂಶಕ್ಕೆ ವಿದ್ಯಾರ್ಥಿಗಳ ದತ್ತಾಂಶಗಳನ್ನು ಅಪ್ಲೋಡ್ ಮಾಡಲು ಅನೇಕ ಸಮಸ್ಯೆಗಳು ಎದುರಾಗಿದ್ದು, ಸರಿಯಾಗಿ ಅಪ್ಲೋಡ್ ಆಗುತ್ತಿಲ್ಲ. ಇದರ ಜತೆಗೆ ಸರ್ವರ್ ಸಮಸ್ಯೆಯೂ ಕಾಡುತ್ತಿದ್ದು, ವಿದ್ಯಾರ್ಥಿ ಗಳು ತರಗತಿಗಳಿಗಿಂತ ಡೇಟಾ ಎಂಟ್ರಿ ಮಾಡುವಲ್ಲಿಯೇ ಹೆಚ್ಚು ಸಮಯ ಕಳೆಯುವಂತಾಗಿದೆ. ಈ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಸಂಬಂಧಪಟ್ಟ ವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಾಂತ್ರಿಕ ದೋಷದಿಂದಾಗಿ ವಿದ್ಯಾರ್ಥಿಗಳು ಶುಲ್ಕದ ಜತೆಗೆ ದಂಡವನ್ನೂ ಪಾವತಿಸುವಂತಾಗಿದೆ. ಜತೆಗೆ ಪದವಿ ವಿದ್ಯಾರ್ಥಿಗಳಿಗೆ ಫಲಿತಾಂಶ ತಡವಾಗುತ್ತಿದ್ದು, ಉನ್ನತ ಶಿಕ್ಷಣಕ್ಕೆ ತಡೆಯಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ತಂತ್ರಾಂಶದಲ್ಲಿನ ದೋಷವನ್ನು ಸರಿಪಡಿಸಬೇಕಿದೆ.
-ಕೀರ್ತನ ಕುಶಾಲಪ್ಪ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…