ಓದುಗರ ಪತ್ರ

ಓದುಗರ ಪತ್ರ| ತಾಂತ್ರಿಕ ದೋಷ ಸರಿಪಡಿಸಿ

ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯುಸಿಎಂಎಸ್ (ಯುನೈಟೆಡ್ ಯುನಿವರ್ಸಿಟಿ ಮತ್ತು ಕಾಲೇಜು ನಿರ್ವಹಣೆ) ಯೋಜನೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ.

ಆದರೆ, ಈ ಯೋಜನೆ ಜಾರಿಯಾದಾಗಿನಿಂದ ಇದರಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೆ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೇಲೆ ನಿರುತ್ಸಾಹ ಮೂಡಿದೆ. ಈ ತಂತ್ರಾಂಶಕ್ಕೆ ವಿದ್ಯಾರ್ಥಿಗಳ ದತ್ತಾಂಶಗಳನ್ನು ಅಪ್ಲೋಡ್ ಮಾಡಲು ಅನೇಕ ಸಮಸ್ಯೆಗಳು ಎದುರಾಗಿದ್ದು, ಸರಿಯಾಗಿ ಅಪ್ಲೋಡ್ ಆಗುತ್ತಿಲ್ಲ. ಇದರ ಜತೆಗೆ ಸರ್ವರ್ ಸಮಸ್ಯೆಯೂ ಕಾಡುತ್ತಿದ್ದು, ವಿದ್ಯಾರ್ಥಿ ಗಳು ತರಗತಿಗಳಿಗಿಂತ ಡೇಟಾ ಎಂಟ್ರಿ ಮಾಡುವಲ್ಲಿಯೇ ಹೆಚ್ಚು ಸಮಯ ಕಳೆಯುವಂತಾಗಿದೆ. ಈ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಸಂಬಂಧಪಟ್ಟ ವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಾಂತ್ರಿಕ ದೋಷದಿಂದಾಗಿ ವಿದ್ಯಾರ್ಥಿಗಳು ಶುಲ್ಕದ ಜತೆಗೆ ದಂಡವನ್ನೂ ಪಾವತಿಸುವಂತಾಗಿದೆ. ಜತೆಗೆ ಪದವಿ ವಿದ್ಯಾರ್ಥಿಗಳಿಗೆ ಫಲಿತಾಂಶ ತಡವಾಗುತ್ತಿದ್ದು, ಉನ್ನತ ಶಿಕ್ಷಣಕ್ಕೆ ತಡೆಯಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ತಂತ್ರಾಂಶದಲ್ಲಿನ ದೋಷವನ್ನು ಸರಿಪಡಿಸಬೇಕಿದೆ.
-ಕೀರ್ತನ ಕುಶಾಲಪ್ಪ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago