ಓದುಗರ ಪತ್ರ
ಮೈಸೂರಿನ ಎಲ್ಲ ವಾರ್ಡ್ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ.
ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್ನ ಮನೆ ಮನೆಗೆ ತೆರಳಿ ಜನರಿಗೆ ಹಸಿ ಕಸ ಮತ್ತು ಒಣ ಕಸ ವಿಂಗಡನೆಯ ಬಗ್ಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಅದರಿಂದಾಗುವ ಪ್ರಯೋಜನಗಳನ್ನು ವಿವರಿಸುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮನೆಯಲ್ಲೇ ಹಸಿ ಕಸ ಮತ್ತು ಒಣ ಕಸ ವಿಂಗಡಣೆ ಮಾಡಿ ಮೈಸೂರು ನಗರವನ್ನು ಸ್ವಚ್ಛ ನಗರಿ ಆಗಲು ಸಹಕರಿಸಬೇಕು. -ಎಂ. ಕೆ. ಕಿರಣ್, ಟೆಲಿಕಾಂ ಕಾಲೋನಿ, ಉದಯಗಿರಿ , ಮೈಸೂರು
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…