ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು ಆದೇಶ ನೀಡಿದರೆ ಸಾಲದು, ಹೇಗೆ ಇಡುವ ಬದಲು ಹೆಚ್ಚಿಸಬೇಕು ಎಂಬುದನ್ನು ವಿಶ್ಲೇಷಿಸುವ ಪ್ರಯತ್ನವನ್ನೂ ಮಾಡಬೇಕು.
ಇತ್ತೀಚೆಗೆ ಷೇರು ಮಾರುಕಟ್ಟೆಗಳು ನಾಗಾಲೋಟದಲ್ಲಿ ಏರುತ್ತಿದ್ದು, ಹೂಡಿಕೆದಾರರು ಬ್ಯಾಂಕುಗಳಲ್ಲಿ ಠೇವಣಿ ಇಡುವ ಷೇರುಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ. ಠೇವಣಿಗಳ ಮೇಲೆ ಶೇ.9ರಷ್ಟು ಬಡ್ಡಿದರದಲ್ಲಿ ರಿಟರ್ನ್ಸ್ ನೀಡುವ ಬ್ಯಾಂಕುಗಳು ಠೇವಣಿದಾರರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಇದೂ ಸಾಲದು ಎಂಬಂತೆ ಆ ಕಿಸಬಾಕಿ ಬಡ್ಡಿಗೂ ಟ್ಯಾಕ್ಸ್ ವಿಧಿಸುತ್ತಾರೆ. ಜನತೆ ಗಳಿಸಿದ ಆದಾಯದಲ್ಲಿ ಶೇ.47ರಷ್ಟನ್ನು ವಿವಿಧ ರೀತಿಯ ತೆರಿಗೆಯ ಹೆಸರಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಹೀಗಾದರೆ ಜನರು ಠೇವಣಿ ಇಡುವುದರಿಂದ ಸಿಗುವ ಲಾಭವಾದರೂ ಏನು? ಆದ್ದರಿಂದ ವಿತ್ತ ಸಚಿವರು ಠೇವಣಿಗಳ ಮೇಲೆ ಸಾರ್ವಜನಿಕರಿಗೆ ಉತ್ತಮ ಲಾಭಗಳು ಸಿಗುವಂತೆ ಮಾಡಿ ಠೇವಣಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…