ಓದುಗರ ಪತ್ರ
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು ಆದೇಶ ನೀಡಿದರೆ ಸಾಲದು, ಹೇಗೆ ಇಡುವ ಬದಲು ಹೆಚ್ಚಿಸಬೇಕು ಎಂಬುದನ್ನು ವಿಶ್ಲೇಷಿಸುವ ಪ್ರಯತ್ನವನ್ನೂ ಮಾಡಬೇಕು.
ಇತ್ತೀಚೆಗೆ ಷೇರು ಮಾರುಕಟ್ಟೆಗಳು ನಾಗಾಲೋಟದಲ್ಲಿ ಏರುತ್ತಿದ್ದು, ಹೂಡಿಕೆದಾರರು ಬ್ಯಾಂಕುಗಳಲ್ಲಿ ಠೇವಣಿ ಇಡುವ ಷೇರುಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ. ಠೇವಣಿಗಳ ಮೇಲೆ ಶೇ.9ರಷ್ಟು ಬಡ್ಡಿದರದಲ್ಲಿ ರಿಟರ್ನ್ಸ್ ನೀಡುವ ಬ್ಯಾಂಕುಗಳು ಠೇವಣಿದಾರರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಇದೂ ಸಾಲದು ಎಂಬಂತೆ ಆ ಕಿಸಬಾಕಿ ಬಡ್ಡಿಗೂ ಟ್ಯಾಕ್ಸ್ ವಿಧಿಸುತ್ತಾರೆ. ಜನತೆ ಗಳಿಸಿದ ಆದಾಯದಲ್ಲಿ ಶೇ.47ರಷ್ಟನ್ನು ವಿವಿಧ ರೀತಿಯ ತೆರಿಗೆಯ ಹೆಸರಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಹೀಗಾದರೆ ಜನರು ಠೇವಣಿ ಇಡುವುದರಿಂದ ಸಿಗುವ ಲಾಭವಾದರೂ ಏನು? ಆದ್ದರಿಂದ ವಿತ್ತ ಸಚಿವರು ಠೇವಣಿಗಳ ಮೇಲೆ ಸಾರ್ವಜನಿಕರಿಗೆ ಉತ್ತಮ ಲಾಭಗಳು ಸಿಗುವಂತೆ ಮಾಡಿ ಠೇವಣಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…