ಓದುಗರ ಪತ್ರ
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು ಆದೇಶ ನೀಡಿದರೆ ಸಾಲದು, ಹೇಗೆ ಇಡುವ ಬದಲು ಹೆಚ್ಚಿಸಬೇಕು ಎಂಬುದನ್ನು ವಿಶ್ಲೇಷಿಸುವ ಪ್ರಯತ್ನವನ್ನೂ ಮಾಡಬೇಕು.
ಇತ್ತೀಚೆಗೆ ಷೇರು ಮಾರುಕಟ್ಟೆಗಳು ನಾಗಾಲೋಟದಲ್ಲಿ ಏರುತ್ತಿದ್ದು, ಹೂಡಿಕೆದಾರರು ಬ್ಯಾಂಕುಗಳಲ್ಲಿ ಠೇವಣಿ ಇಡುವ ಷೇರುಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ. ಠೇವಣಿಗಳ ಮೇಲೆ ಶೇ.9ರಷ್ಟು ಬಡ್ಡಿದರದಲ್ಲಿ ರಿಟರ್ನ್ಸ್ ನೀಡುವ ಬ್ಯಾಂಕುಗಳು ಠೇವಣಿದಾರರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಇದೂ ಸಾಲದು ಎಂಬಂತೆ ಆ ಕಿಸಬಾಕಿ ಬಡ್ಡಿಗೂ ಟ್ಯಾಕ್ಸ್ ವಿಧಿಸುತ್ತಾರೆ. ಜನತೆ ಗಳಿಸಿದ ಆದಾಯದಲ್ಲಿ ಶೇ.47ರಷ್ಟನ್ನು ವಿವಿಧ ರೀತಿಯ ತೆರಿಗೆಯ ಹೆಸರಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಹೀಗಾದರೆ ಜನರು ಠೇವಣಿ ಇಡುವುದರಿಂದ ಸಿಗುವ ಲಾಭವಾದರೂ ಏನು? ಆದ್ದರಿಂದ ವಿತ್ತ ಸಚಿವರು ಠೇವಣಿಗಳ ಮೇಲೆ ಸಾರ್ವಜನಿಕರಿಗೆ ಉತ್ತಮ ಲಾಭಗಳು ಸಿಗುವಂತೆ ಮಾಡಿ ಠೇವಣಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…