ಓದುಗರ ಪತ್ರ
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು ಆದೇಶ ನೀಡಿದರೆ ಸಾಲದು, ಹೇಗೆ ಇಡುವ ಬದಲು ಹೆಚ್ಚಿಸಬೇಕು ಎಂಬುದನ್ನು ವಿಶ್ಲೇಷಿಸುವ ಪ್ರಯತ್ನವನ್ನೂ ಮಾಡಬೇಕು.
ಇತ್ತೀಚೆಗೆ ಷೇರು ಮಾರುಕಟ್ಟೆಗಳು ನಾಗಾಲೋಟದಲ್ಲಿ ಏರುತ್ತಿದ್ದು, ಹೂಡಿಕೆದಾರರು ಬ್ಯಾಂಕುಗಳಲ್ಲಿ ಠೇವಣಿ ಇಡುವ ಷೇರುಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ. ಠೇವಣಿಗಳ ಮೇಲೆ ಶೇ.9ರಷ್ಟು ಬಡ್ಡಿದರದಲ್ಲಿ ರಿಟರ್ನ್ಸ್ ನೀಡುವ ಬ್ಯಾಂಕುಗಳು ಠೇವಣಿದಾರರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಇದೂ ಸಾಲದು ಎಂಬಂತೆ ಆ ಕಿಸಬಾಕಿ ಬಡ್ಡಿಗೂ ಟ್ಯಾಕ್ಸ್ ವಿಧಿಸುತ್ತಾರೆ. ಜನತೆ ಗಳಿಸಿದ ಆದಾಯದಲ್ಲಿ ಶೇ.47ರಷ್ಟನ್ನು ವಿವಿಧ ರೀತಿಯ ತೆರಿಗೆಯ ಹೆಸರಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಹೀಗಾದರೆ ಜನರು ಠೇವಣಿ ಇಡುವುದರಿಂದ ಸಿಗುವ ಲಾಭವಾದರೂ ಏನು? ಆದ್ದರಿಂದ ವಿತ್ತ ಸಚಿವರು ಠೇವಣಿಗಳ ಮೇಲೆ ಸಾರ್ವಜನಿಕರಿಗೆ ಉತ್ತಮ ಲಾಭಗಳು ಸಿಗುವಂತೆ ಮಾಡಿ ಠೇವಣಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…