ಓದುಗರ ಪತ್ರ
ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು ಆದೇಶ ನೀಡಿದರೆ ಸಾಲದು, ಹೇಗೆ ಇಡುವ ಬದಲು ಹೆಚ್ಚಿಸಬೇಕು ಎಂಬುದನ್ನು ವಿಶ್ಲೇಷಿಸುವ ಪ್ರಯತ್ನವನ್ನೂ ಮಾಡಬೇಕು.
ಇತ್ತೀಚೆಗೆ ಷೇರು ಮಾರುಕಟ್ಟೆಗಳು ನಾಗಾಲೋಟದಲ್ಲಿ ಏರುತ್ತಿದ್ದು, ಹೂಡಿಕೆದಾರರು ಬ್ಯಾಂಕುಗಳಲ್ಲಿ ಠೇವಣಿ ಇಡುವ ಷೇರುಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ. ಠೇವಣಿಗಳ ಮೇಲೆ ಶೇ.9ರಷ್ಟು ಬಡ್ಡಿದರದಲ್ಲಿ ರಿಟರ್ನ್ಸ್ ನೀಡುವ ಬ್ಯಾಂಕುಗಳು ಠೇವಣಿದಾರರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಇದೂ ಸಾಲದು ಎಂಬಂತೆ ಆ ಕಿಸಬಾಕಿ ಬಡ್ಡಿಗೂ ಟ್ಯಾಕ್ಸ್ ವಿಧಿಸುತ್ತಾರೆ. ಜನತೆ ಗಳಿಸಿದ ಆದಾಯದಲ್ಲಿ ಶೇ.47ರಷ್ಟನ್ನು ವಿವಿಧ ರೀತಿಯ ತೆರಿಗೆಯ ಹೆಸರಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಹೀಗಾದರೆ ಜನರು ಠೇವಣಿ ಇಡುವುದರಿಂದ ಸಿಗುವ ಲಾಭವಾದರೂ ಏನು? ಆದ್ದರಿಂದ ವಿತ್ತ ಸಚಿವರು ಠೇವಣಿಗಳ ಮೇಲೆ ಸಾರ್ವಜನಿಕರಿಗೆ ಉತ್ತಮ ಲಾಭಗಳು ಸಿಗುವಂತೆ ಮಾಡಿ ಠೇವಣಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…