ಓದುಗರ ಪತ್ರ

ಓದುಗರ ಪತ್ರ | ಆಸ್ಪತ್ರೆಯ ಆವರಣದಲ್ಲಿಯೇ ಅಗತ್ಯ ವಸ್ತುಗಳು ಸಿಗಲಿ

ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ವೈದ್ಯಕೀಯ ಸೌಲಭ್ಯವನ್ನು ಪಡೆಯುತ್ತಾರೆ. ಇವರಿಗೆ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ಸೌಲಭ್ಯಗಳು ಆಸ್ಪತ್ರೆ ಆವರ
ಣದಲ್ಲಿಯೇ ಸಿಗುವಂತೆ ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮೆಡಿಕಲ್‌ಗಳು, ಸ್ಕ್ಯಾನಿಂಗ್ ಉಪಕರಣಗಳು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಸೂಕ್ತ ವೈದ್ಯಕೀಯ ಆರೈಕೆಯೇ ಸಿಗದೆ ಅವರು ಖಾಸಗಿ ಆಸ್ಪತ್ರೆಗಳಮೊರೆಹೋಗುವಂತಾಗಿದೆ.

ಸರ್ಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಹಾಪ್‌ಕಾಮ್ಸ್‌ಗಳ ಮೂಲಕ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ಮತ್ತು ಹಣ್ಣು-ಹಂಪಲುಗಳನ್ನು ಪೂರೈಕೆ ಮಾಡುತ್ತಿದೆ. ಇಂತಹ ವ್ಯವಸ್ಥೆಯನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿಯೂ ಕಲ್ಪಿಸಿದರೆ ರೋಗಿಗಳಿಗೆ ಗುಣಮಟ್ಟದ ಆಹಾರ ಹಾಗೂ ರಿಯಾಯಿತಿ ದರದಲ್ಲಿ ಹಣ್ಣುಗಳು ಲಭ್ಯವಾಗಲಿವೆ. ರೋಗಿಗಳು ಆಹಾರ, ಹಣ್ಣಿಗಾಗಿ ಆಸ್ಪತ್ರೆಯಿಂದ ಹೊರ ಹೋಗುವುದೂ ತಪ್ಪುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ವಿಶೇಷ ಯೋಜನೆ ರೂಪಿಸಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ವಸ್ತುಗಳೂ ಸಿಗುವಂತೆ ವ್ಯವಸ್ಥೆ ಮಾಡಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

41 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

51 mins ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago