ಓದುಗರ ಪತ್ರ

ಓದುಗರ ಪತ್ರ | ಆಸ್ಪತ್ರೆಯ ಆವರಣದಲ್ಲಿಯೇ ಅಗತ್ಯ ವಸ್ತುಗಳು ಸಿಗಲಿ

ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ವೈದ್ಯಕೀಯ ಸೌಲಭ್ಯವನ್ನು ಪಡೆಯುತ್ತಾರೆ. ಇವರಿಗೆ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ಸೌಲಭ್ಯಗಳು ಆಸ್ಪತ್ರೆ ಆವರ
ಣದಲ್ಲಿಯೇ ಸಿಗುವಂತೆ ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮೆಡಿಕಲ್‌ಗಳು, ಸ್ಕ್ಯಾನಿಂಗ್ ಉಪಕರಣಗಳು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಸೂಕ್ತ ವೈದ್ಯಕೀಯ ಆರೈಕೆಯೇ ಸಿಗದೆ ಅವರು ಖಾಸಗಿ ಆಸ್ಪತ್ರೆಗಳಮೊರೆಹೋಗುವಂತಾಗಿದೆ.

ಸರ್ಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಹಾಪ್‌ಕಾಮ್ಸ್‌ಗಳ ಮೂಲಕ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ಮತ್ತು ಹಣ್ಣು-ಹಂಪಲುಗಳನ್ನು ಪೂರೈಕೆ ಮಾಡುತ್ತಿದೆ. ಇಂತಹ ವ್ಯವಸ್ಥೆಯನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿಯೂ ಕಲ್ಪಿಸಿದರೆ ರೋಗಿಗಳಿಗೆ ಗುಣಮಟ್ಟದ ಆಹಾರ ಹಾಗೂ ರಿಯಾಯಿತಿ ದರದಲ್ಲಿ ಹಣ್ಣುಗಳು ಲಭ್ಯವಾಗಲಿವೆ. ರೋಗಿಗಳು ಆಹಾರ, ಹಣ್ಣಿಗಾಗಿ ಆಸ್ಪತ್ರೆಯಿಂದ ಹೊರ ಹೋಗುವುದೂ ತಪ್ಪುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ವಿಶೇಷ ಯೋಜನೆ ರೂಪಿಸಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ವಸ್ತುಗಳೂ ಸಿಗುವಂತೆ ವ್ಯವಸ್ಥೆ ಮಾಡಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago