ಓದುಗರ ಪತ್ರ

ಓದುಗರ ಪತ್ರ | ಹೆಣ್ಣು ಮಕ್ಕಳು ಬಲಿಷ್ಠರಾಗಬೇಕು

ಪ್ರತಿ ವರ್ಷ ಮಾರ್ಚ್ ೮ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹಿಳೆಯರನ್ನು ಈ ದಿನ ನೆನಪಿಸಿಕೊಳ್ಳಲಾಗುತ್ತದೆ. ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿ, ಮಹಿಳಾ ಸಬಲೀಕರಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಾದರೂ ಅವು ಯಶಸ್ವಿಯಾಗಿ ಜಾರಿಯಾಗಿದ್ದು ಕಡಿಮೆ. ಹೀಗಾಗಿಯೇ ಇಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಮಾತ್ರ ನಿಂತಿಲ್ಲ. ಹೆಣ್ಣನ್ನು ಭೂಮಿ ತಾಯಿಗೆ ಹೋಲಿಸಿ ಗೌರವಿಸುವ ಈ ಸಮಾಜದಲ್ಲಿ ಹೆಣ್ಣಿಗೆ ಅನ್ಯಾಯವಾದಾಗ ಮಾತ್ರ ನ್ಯಾಯ ದೊರಕುವುದಿಲ್ಲ ಎಂಬುದೇ ಬೇಸರದ ಸಂಗತಿ.

ಹೆಣ್ಣು ಮಕ್ಕಳು ಮನೆಯ ನಾಲ್ಕು ಗೋಡೆಯೊಳಗೆ ಮಾತ್ರ ದುಡಿಯಬೇಕು ಎಂಬ ಮನಸ್ಥಿತಿಯಿಂದ ಹೊರಬಂದು, ಶಿಕ್ಷಣ ಪಡೆದು ಸಮಾಜದ ಎಲ್ಲ ರಂಗಗಳಲ್ಲಿಯೂ ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾನೂನುಗಳು ಜಾರಿಯಾದರೂ, ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕು ಎಂಬ ಹೋರಾಟಗಳು ನಡೆದರೂ ಹೆಣ್ಣಿನ ಮೇಲಿನ ಶೋಷಣೆಗಳು ನಿರಂತರವಾಗಿ ನಡೆಯುತ್ತಿವೆ. ಸೌಜ್ಯನ ಎಂಬ ಯುವತಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿ ಹಲವು ವರ್ಷಗಳೇ ಕಳೆದರೂ ಇಂದಿಗೂ ನ್ಯಾಯ ದೊರಕಿಲ್ಲ. ಹೀಗಾದರೆ ಸಮಾಜದಲ್ಲಿ ಹೆಣ್ಣು ಮಕ್ಕಳು ನಿರ್ಭಯವಾಗಿ ಬದುಕುವುದು ಹೇಗೆ? ಮಹಿಳೆಯರ ಸಬಲೀಕರಣವಾಗುವುದಾದರೂ ಹೇಗೆ? ಮುಂದಾದರೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಕೊನೆಗೊಂಡು, ಹೆಣ್ಣು ಮಕ್ಕಳನ್ನು ಗೌರವಿಸುವ ಸಂಸ್ಕ ತಿ ಬೆಳೆಯಲಿ. –ಕೌಶಲ್ಯ, ಪತ್ರಿಕೋದ್ಯಮ ವಿದ್ಯಾರ್ಥಿ, ಮಾನಸ ಗಂಗೋತ್ರಿ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

1 hour ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

3 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

4 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

5 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

5 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

5 hours ago