ಓದುಗರ ಪತ್ರ

ಓದುಗರ ಪತ್ರ | ಹೆಣ್ಣು ಮಕ್ಕಳು ಬಲಿಷ್ಠರಾಗಬೇಕು

ಪ್ರತಿ ವರ್ಷ ಮಾರ್ಚ್ ೮ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹಿಳೆಯರನ್ನು ಈ ದಿನ ನೆನಪಿಸಿಕೊಳ್ಳಲಾಗುತ್ತದೆ. ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿ, ಮಹಿಳಾ ಸಬಲೀಕರಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಾದರೂ ಅವು ಯಶಸ್ವಿಯಾಗಿ ಜಾರಿಯಾಗಿದ್ದು ಕಡಿಮೆ. ಹೀಗಾಗಿಯೇ ಇಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಮಾತ್ರ ನಿಂತಿಲ್ಲ. ಹೆಣ್ಣನ್ನು ಭೂಮಿ ತಾಯಿಗೆ ಹೋಲಿಸಿ ಗೌರವಿಸುವ ಈ ಸಮಾಜದಲ್ಲಿ ಹೆಣ್ಣಿಗೆ ಅನ್ಯಾಯವಾದಾಗ ಮಾತ್ರ ನ್ಯಾಯ ದೊರಕುವುದಿಲ್ಲ ಎಂಬುದೇ ಬೇಸರದ ಸಂಗತಿ.

ಹೆಣ್ಣು ಮಕ್ಕಳು ಮನೆಯ ನಾಲ್ಕು ಗೋಡೆಯೊಳಗೆ ಮಾತ್ರ ದುಡಿಯಬೇಕು ಎಂಬ ಮನಸ್ಥಿತಿಯಿಂದ ಹೊರಬಂದು, ಶಿಕ್ಷಣ ಪಡೆದು ಸಮಾಜದ ಎಲ್ಲ ರಂಗಗಳಲ್ಲಿಯೂ ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾನೂನುಗಳು ಜಾರಿಯಾದರೂ, ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕು ಎಂಬ ಹೋರಾಟಗಳು ನಡೆದರೂ ಹೆಣ್ಣಿನ ಮೇಲಿನ ಶೋಷಣೆಗಳು ನಿರಂತರವಾಗಿ ನಡೆಯುತ್ತಿವೆ. ಸೌಜ್ಯನ ಎಂಬ ಯುವತಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿ ಹಲವು ವರ್ಷಗಳೇ ಕಳೆದರೂ ಇಂದಿಗೂ ನ್ಯಾಯ ದೊರಕಿಲ್ಲ. ಹೀಗಾದರೆ ಸಮಾಜದಲ್ಲಿ ಹೆಣ್ಣು ಮಕ್ಕಳು ನಿರ್ಭಯವಾಗಿ ಬದುಕುವುದು ಹೇಗೆ? ಮಹಿಳೆಯರ ಸಬಲೀಕರಣವಾಗುವುದಾದರೂ ಹೇಗೆ? ಮುಂದಾದರೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಕೊನೆಗೊಂಡು, ಹೆಣ್ಣು ಮಕ್ಕಳನ್ನು ಗೌರವಿಸುವ ಸಂಸ್ಕ ತಿ ಬೆಳೆಯಲಿ. –ಕೌಶಲ್ಯ, ಪತ್ರಿಕೋದ್ಯಮ ವಿದ್ಯಾರ್ಥಿ, ಮಾನಸ ಗಂಗೋತ್ರಿ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

5 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

5 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

6 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

6 hours ago