ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ ತಂಪು ಪಾನೀಯ ಕುಡಿಯಬೇಕು ಎನಿಸುತ್ತದೆ. ಮನುಷ್ಯರಾದ ನಮಗೇ ಹೀಗೆ ಅನಿಸಬೇಕಾದರೆ, ನಮ್ಮಂತೆಯೇ ಜೀವಿಸುವ ಪ್ರಾಣಿ, ಪಕ್ಷಿಗಳ ಪಾಡು ಯಾವ ರೀತಿ ಇರಬಹುದೆಂದು ಊಹಿಸಿ.
ಇಂತಹ ಬಿಸಿಲಿಗೆ ಪ್ರಾಣಿ, ಪಕ್ಷಿಗಳು ತಮ್ಮ ದಾಹವನ್ನು ನೀಗಿಸಿಕೊಳ್ಳಲು ನೀರಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸುತ್ತವೆ. ಬಿಸಿಲಿನ ಬೇಗೆಗೆ ಹಲವು ಕಡೆ ಕೆರೆ-ಕಟ್ಟೆಗಳಲ್ಲಿನ ನೀರೂ ಬತ್ತಿ ಹೋಗಿರುತ್ತದೆ. ಹೀಗೆ ನೀರಿಲ್ಲದೆ ಪ್ರಾಣಿ, ಪಕ್ಷಿಗಳು ಪರದಾಡಬೇಕಾಗುತ್ತದೆ. ಆದ್ದರಿಂದ ಕನಿಷ್ಠಪಕ್ಷ ನಮ್ಮ ಸುತ್ತಮುತ್ತ ವಿವಿಧ ರೀತಿಯ ಪಕ್ಷಿಗಳು ಹಾರಾಡುತ್ತಿದ್ದಾರೆ, ಅವುಗಳನ್ನು ಗಮನಿಸಿ ಮನೆ ಮುಂದೆ, ಅಥವಾ ಮನೆಯ ಮೇಲೆ ಒಂದು ಚೆಂಬು ನೀರು ಇಟ್ಟರೆ ಅವುಗಳ ದಾಹವನ್ನು ಸ್ವಲ್ಪಮಟ್ಟಿಗಾದರೂ ನೀಗಿಸುವಂತಾಗುತ್ತದೆ. ಜೊತೆಗೆ ಬೇಸಿಗೆ ಮುಗಿಯುವವರೆಗೂ ದಿನನಿತ್ಯ ಮನೆ ಮುಂದೆ ನೀರು ಇಡುವ ಮುಖಾಂತರ ಮಾನವೀಯತೆ ತೋರಿಸುವುದು ಮನುಷ್ಯ ಧರ್ಮ ಎಂದು ಭಾವಿಸಬಹುದು.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…