ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ ತಂಪು ಪಾನೀಯ ಕುಡಿಯಬೇಕು ಎನಿಸುತ್ತದೆ. ಮನುಷ್ಯರಾದ ನಮಗೇ ಹೀಗೆ ಅನಿಸಬೇಕಾದರೆ, ನಮ್ಮಂತೆಯೇ ಜೀವಿಸುವ ಪ್ರಾಣಿ, ಪಕ್ಷಿಗಳ ಪಾಡು ಯಾವ ರೀತಿ ಇರಬಹುದೆಂದು ಊಹಿಸಿ.
ಇಂತಹ ಬಿಸಿಲಿಗೆ ಪ್ರಾಣಿ, ಪಕ್ಷಿಗಳು ತಮ್ಮ ದಾಹವನ್ನು ನೀಗಿಸಿಕೊಳ್ಳಲು ನೀರಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸುತ್ತವೆ. ಬಿಸಿಲಿನ ಬೇಗೆಗೆ ಹಲವು ಕಡೆ ಕೆರೆ-ಕಟ್ಟೆಗಳಲ್ಲಿನ ನೀರೂ ಬತ್ತಿ ಹೋಗಿರುತ್ತದೆ. ಹೀಗೆ ನೀರಿಲ್ಲದೆ ಪ್ರಾಣಿ, ಪಕ್ಷಿಗಳು ಪರದಾಡಬೇಕಾಗುತ್ತದೆ. ಆದ್ದರಿಂದ ಕನಿಷ್ಠಪಕ್ಷ ನಮ್ಮ ಸುತ್ತಮುತ್ತ ವಿವಿಧ ರೀತಿಯ ಪಕ್ಷಿಗಳು ಹಾರಾಡುತ್ತಿದ್ದಾರೆ, ಅವುಗಳನ್ನು ಗಮನಿಸಿ ಮನೆ ಮುಂದೆ, ಅಥವಾ ಮನೆಯ ಮೇಲೆ ಒಂದು ಚೆಂಬು ನೀರು ಇಟ್ಟರೆ ಅವುಗಳ ದಾಹವನ್ನು ಸ್ವಲ್ಪಮಟ್ಟಿಗಾದರೂ ನೀಗಿಸುವಂತಾಗುತ್ತದೆ. ಜೊತೆಗೆ ಬೇಸಿಗೆ ಮುಗಿಯುವವರೆಗೂ ದಿನನಿತ್ಯ ಮನೆ ಮುಂದೆ ನೀರು ಇಡುವ ಮುಖಾಂತರ ಮಾನವೀಯತೆ ತೋರಿಸುವುದು ಮನುಷ್ಯ ಧರ್ಮ ಎಂದು ಭಾವಿಸಬಹುದು.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…