ಓದುಗರ ಪತ್ರ
ಅಂಚೆ ಇಲಾಖೆಯ ವಿಶ್ವಾಸಾರ್ಹ ಸೇವೆಗಳಲ್ಲಿ ಒಂದಾಗಿದ್ದ ನೋಂದಣಿ ಅಂಚೆ ( Registered Post) ಸೇವೆಯನ್ನು ಆಗಸ್ಟ್ ತಿಂಗಳ ಒಂದನೇ ತಾರೀಖಿನಿಂದ ಹಿಂದಕ್ಕೆ ಪಡೆಯಲಾಗಿದ್ದು, ಇದರ ಬದಲು ಸ್ಪೀಡ್ ಪೋಸ್ಟ್ ಸೇವೆಯನ್ನು ಗ್ರಾಹಕರು ಉಪಯೋಗಿಸಿಕೊಳ್ಳಬಹುದಾಗಿದೆ.
ದೇಶದಲ್ಲಿ ಅಂಚೆ ಕಚೇರಿಗಳು ಪ್ರಾರಂಭಗೊಂಡ ದಿನದಿಂದಲೂ ತನ್ನ ವಿಶ್ವಾಸಾರ್ಹ ಸೇವೆಯಿಂದ ನೋಂದಣಿ ಅಂಚೆ ಜನಪ್ರಿಯವಾಗಿತ್ತು. ಸಾಮಾನ್ಯವಾಗಿ ವಕೀಲರು ನೋಂದಣಿ ಅಂಚೆ ಮೂಲಕ ಎದುರು ಪಾರ್ಟಿದಾರರಿಗೆ ನೋಟಿಸ್ ಇತ್ಯಾದಿಗಳನ್ನು ಕಳುಹಿಸುತ್ತಿದ್ದರು.
ಕಂಪೆನಿ ಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯದ ಇತರರು ಕೂಡ ಕಾಗದ ಪತ್ರಗಳನ್ನು ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸುತ್ತಿದ್ದರು. ಅಂಚೆ ಇಲಾಖೆಯ ಪರಿಣಾಮಕಾರಿ ಸೇವೆ ಅನಿಸಿದ್ದ ನೋಂದಣಿ ಅಂಚೆ ಸೇವೆಯನ್ನು ನಿಲ್ಲಿಸು ತ್ತಿರುವುದು ಬೇಸರದ ಸಂಗತಿ.
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಟೆಲಿಗ್ರಾಂ ಅಥವಾ ತಂತಿ ಸೇವೆಯನ್ನು ಬಹಳ ವರ್ಷಗಳ ಹಿಂದೆಯೇ ನಿಲ್ಲಿಸಲಾಯಿತು. ಆನಂತರ ಸರ್ಟಿಫಿಕೇಟ್ ಆಫ್ ಪೋಸ್ಟಿಂಗ್, ರೆಕಾರ್ಡೆಡ್ ಡೆಲಿವರಿ ಮುಂತಾದ ಸೇವೆಗಳನ್ನು ನಿಲ್ಲಿಸಲಾಯಿತು. ಇದೀಗ ನೋಂದಣಿ ಅಂಚೆ ಸೇವೆಯನ್ನೂ ಹಿಂದಕ್ಕೆ ಪಡೆಯುವುದರೊಂದಿಗೆ ಅಂಚೆ ಇಲಾಖೆಯ ಪ್ರಮುಖ ಸೇವೆಗಳು ಸ್ಥಗಿತಗೊಂಡಂತಾಗಿದೆ. ಸದ್ಯ ಅಂಚೆ ಕಚೇರಿಗಳಾದರೂ ಉಳಿದುಕೊಂಡಿವೆಯಲ್ಲ ಅದೇ ನಮ್ಮ ಪುಣ್ಯ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…