ಓದುಗರ ಪತ್ರ

ಓದುಗರ ಪತ್ರ: ನೋಂದಣಿ ಅಂಚೆಗೆ ವಿದಾಯ!

ಅಂಚೆ ಇಲಾಖೆಯ ವಿಶ್ವಾಸಾರ್ಹ ಸೇವೆಗಳಲ್ಲಿ ಒಂದಾಗಿದ್ದ ನೋಂದಣಿ ಅಂಚೆ ( Registered Post) ಸೇವೆಯನ್ನು ಆಗಸ್ಟ್ ತಿಂಗಳ ಒಂದನೇ ತಾರೀಖಿನಿಂದ ಹಿಂದಕ್ಕೆ ಪಡೆಯಲಾಗಿದ್ದು, ಇದರ ಬದಲು ಸ್ಪೀಡ್ ಪೋಸ್ಟ್ ಸೇವೆಯನ್ನು ಗ್ರಾಹಕರು ಉಪಯೋಗಿಸಿಕೊಳ್ಳಬಹುದಾಗಿದೆ.

ದೇಶದಲ್ಲಿ ಅಂಚೆ ಕಚೇರಿಗಳು ಪ್ರಾರಂಭಗೊಂಡ ದಿನದಿಂದಲೂ ತನ್ನ ವಿಶ್ವಾಸಾರ್ಹ ಸೇವೆಯಿಂದ ನೋಂದಣಿ ಅಂಚೆ ಜನಪ್ರಿಯವಾಗಿತ್ತು. ಸಾಮಾನ್ಯವಾಗಿ ವಕೀಲರು ನೋಂದಣಿ ಅಂಚೆ ಮೂಲಕ ಎದುರು ಪಾರ್ಟಿದಾರರಿಗೆ ನೋಟಿಸ್ ಇತ್ಯಾದಿಗಳನ್ನು ಕಳುಹಿಸುತ್ತಿದ್ದರು.

ಕಂಪೆನಿ ಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯದ ಇತರರು ಕೂಡ ಕಾಗದ ಪತ್ರಗಳನ್ನು ರಿಜಿಸ್ಟರ‍್ಡ್ ಪೋಸ್ಟ್ ಮೂಲಕ ಕಳುಹಿಸುತ್ತಿದ್ದರು. ಅಂಚೆ ಇಲಾಖೆಯ ಪರಿಣಾಮಕಾರಿ ಸೇವೆ ಅನಿಸಿದ್ದ ನೋಂದಣಿ ಅಂಚೆ ಸೇವೆಯನ್ನು ನಿಲ್ಲಿಸು ತ್ತಿರುವುದು ಬೇಸರದ ಸಂಗತಿ.

ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಟೆಲಿಗ್ರಾಂ ಅಥವಾ ತಂತಿ ಸೇವೆಯನ್ನು ಬಹಳ ವರ್ಷಗಳ ಹಿಂದೆಯೇ ನಿಲ್ಲಿಸಲಾಯಿತು. ಆನಂತರ ಸರ್ಟಿಫಿಕೇಟ್ ಆಫ್ ಪೋಸ್ಟಿಂಗ್, ರೆಕಾರ್ಡೆಡ್ ಡೆಲಿವರಿ ಮುಂತಾದ ಸೇವೆಗಳನ್ನು ನಿಲ್ಲಿಸಲಾಯಿತು. ಇದೀಗ ನೋಂದಣಿ ಅಂಚೆ ಸೇವೆಯನ್ನೂ ಹಿಂದಕ್ಕೆ ಪಡೆಯುವುದರೊಂದಿಗೆ ಅಂಚೆ ಇಲಾಖೆಯ ಪ್ರಮುಖ ಸೇವೆಗಳು ಸ್ಥಗಿತಗೊಂಡಂತಾಗಿದೆ. ಸದ್ಯ ಅಂಚೆ ಕಚೇರಿಗಳಾದರೂ ಉಳಿದುಕೊಂಡಿವೆಯಲ್ಲ ಅದೇ ನಮ್ಮ ಪುಣ್ಯ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago