ಓದುಗರ ಪತ್ರ
ಅಂಚೆ ಇಲಾಖೆಯ ವಿಶ್ವಾಸಾರ್ಹ ಸೇವೆಗಳಲ್ಲಿ ಒಂದಾಗಿದ್ದ ನೋಂದಣಿ ಅಂಚೆ ( Registered Post) ಸೇವೆಯನ್ನು ಆಗಸ್ಟ್ ತಿಂಗಳ ಒಂದನೇ ತಾರೀಖಿನಿಂದ ಹಿಂದಕ್ಕೆ ಪಡೆಯಲಾಗಿದ್ದು, ಇದರ ಬದಲು ಸ್ಪೀಡ್ ಪೋಸ್ಟ್ ಸೇವೆಯನ್ನು ಗ್ರಾಹಕರು ಉಪಯೋಗಿಸಿಕೊಳ್ಳಬಹುದಾಗಿದೆ.
ದೇಶದಲ್ಲಿ ಅಂಚೆ ಕಚೇರಿಗಳು ಪ್ರಾರಂಭಗೊಂಡ ದಿನದಿಂದಲೂ ತನ್ನ ವಿಶ್ವಾಸಾರ್ಹ ಸೇವೆಯಿಂದ ನೋಂದಣಿ ಅಂಚೆ ಜನಪ್ರಿಯವಾಗಿತ್ತು. ಸಾಮಾನ್ಯವಾಗಿ ವಕೀಲರು ನೋಂದಣಿ ಅಂಚೆ ಮೂಲಕ ಎದುರು ಪಾರ್ಟಿದಾರರಿಗೆ ನೋಟಿಸ್ ಇತ್ಯಾದಿಗಳನ್ನು ಕಳುಹಿಸುತ್ತಿದ್ದರು.
ಕಂಪೆನಿ ಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯದ ಇತರರು ಕೂಡ ಕಾಗದ ಪತ್ರಗಳನ್ನು ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸುತ್ತಿದ್ದರು. ಅಂಚೆ ಇಲಾಖೆಯ ಪರಿಣಾಮಕಾರಿ ಸೇವೆ ಅನಿಸಿದ್ದ ನೋಂದಣಿ ಅಂಚೆ ಸೇವೆಯನ್ನು ನಿಲ್ಲಿಸು ತ್ತಿರುವುದು ಬೇಸರದ ಸಂಗತಿ.
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಟೆಲಿಗ್ರಾಂ ಅಥವಾ ತಂತಿ ಸೇವೆಯನ್ನು ಬಹಳ ವರ್ಷಗಳ ಹಿಂದೆಯೇ ನಿಲ್ಲಿಸಲಾಯಿತು. ಆನಂತರ ಸರ್ಟಿಫಿಕೇಟ್ ಆಫ್ ಪೋಸ್ಟಿಂಗ್, ರೆಕಾರ್ಡೆಡ್ ಡೆಲಿವರಿ ಮುಂತಾದ ಸೇವೆಗಳನ್ನು ನಿಲ್ಲಿಸಲಾಯಿತು. ಇದೀಗ ನೋಂದಣಿ ಅಂಚೆ ಸೇವೆಯನ್ನೂ ಹಿಂದಕ್ಕೆ ಪಡೆಯುವುದರೊಂದಿಗೆ ಅಂಚೆ ಇಲಾಖೆಯ ಪ್ರಮುಖ ಸೇವೆಗಳು ಸ್ಥಗಿತಗೊಂಡಂತಾಗಿದೆ. ಸದ್ಯ ಅಂಚೆ ಕಚೇರಿಗಳಾದರೂ ಉಳಿದುಕೊಂಡಿವೆಯಲ್ಲ ಅದೇ ನಮ್ಮ ಪುಣ್ಯ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…