ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಕಲ್ಪಿಸಿರುವುದು ಬೇಸರದ ಸಂಗತಿ.
ಗೋಪಾಲಸ್ವಾಮಿ ಬೆಟ್ಟದಲ್ಲಿ ಆನೆಗಳು ಹೆಚ್ಚಾಗಿ ವಿಹರಿಸುತ್ತವೆ. ಸಿನಿಮಾ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಯಾರು ಹೊಣೆ? ಈ ಸಂಬಂಧ ಸ್ಥಳೀಯರು, ರೈತ ಮುಖಂಡರು ಸಂಬಂಧಪಟ್ಟ ಅಽಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೆ ಕರೆ ಸ್ವೀಕರಿಸದೇ ಅಸಡ್ಡೆ ತೋರಿದ್ದಾರೆ. ಆದ್ದರಿಂದ ನಿಯಮ ಉಲ್ಲಂಘಿಸಿದ ಅಽಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮುಂದೆಂದೂ ಇಂತಹಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…