ಓದುಗರ ಪತ್ರ
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ ಹಾಗೂ ಎಲ್ಪಿಜಿ ಅನಿಲ ಸಾಗಣೆ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಆಟೋಗಳಿಗೆ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆ ಮಾಡುವ ಬಂಕ್ಗಳು ಬಂದ್ ಆಗಿದ್ದು, ಆಟೋ ಚಾಲಕರು ಪರದಾಡುವಂತಾಗಿದೆ.
ಆಟೋಗಳಿಗೆ ಸಿಎನ್ಐ ಹಾಗೂ ಎಲ್ಪಿಜಿ ಇಂಧನ ಪೂರೈಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಪೂರೈಕೆಯಲ್ಲಿ ವ್ಯತ್ಯಯ ವಾಗಿರುವುದನ್ನು ದೃಶ್ಯ ಮಾಧ್ಯಮಗಳು ನಿರಂತರವಾಗಿ ಪ್ರಚಾರ ಮಾಡುವ ಮೂಲಕ ಆಟೋಚಾಲಕರಲ್ಲಿ ಆತಂಕ ಮೂಡಿಸುತ್ತಿವೆ. ತಾವು ಕೆಲವು ವಿದ್ಯುನ್ಮಾನ ಮಾಧ್ಯಮಗಳ ಪ್ರಚೋದನೆಗೆ ಒಳಗಾಗಬೇಡಿ ಪೇಟ್ರೋಲ್, ಡೀಸೆಲ್, ಗ್ಯಾಸ್, ವಿದೇಶದಿಂದ ಬರೋದು ಇವೆಲ್ಲದರ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದಾಗಿದೆ. ಕೇಂದ್ರ ಸರ್ಕಾರ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನವನ್ನೇ ನಂಬಿ ಜೀವನ ನಡೆಸುತ್ತಿರುವ ಆಟೋಚಾಲಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಹಾಗೂ ಕೂಡಲೇ ಆಟೋಗಳಿಗೆ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನವನ್ನು ಸಕಾಲಕ್ಕೆ ಪೂರೈಸುವ ಮೂಲಕ ಆಟೋ ಚಾಲಕರ ಹಿತ ಕಾಪಾಡುವುದು ಅಗತ್ಯ. -ಪಿ. ರಾಜು, ಅಶೋಕಪುರಂ, ಮೈಸೂರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…