ಓದುಗರ ಪತ್ರ
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ ಹಾಗೂ ಎಲ್ಪಿಜಿ ಅನಿಲ ಸಾಗಣೆ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಆಟೋಗಳಿಗೆ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆ ಮಾಡುವ ಬಂಕ್ಗಳು ಬಂದ್ ಆಗಿದ್ದು, ಆಟೋ ಚಾಲಕರು ಪರದಾಡುವಂತಾಗಿದೆ.
ಆಟೋಗಳಿಗೆ ಸಿಎನ್ಐ ಹಾಗೂ ಎಲ್ಪಿಜಿ ಇಂಧನ ಪೂರೈಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಪೂರೈಕೆಯಲ್ಲಿ ವ್ಯತ್ಯಯ ವಾಗಿರುವುದನ್ನು ದೃಶ್ಯ ಮಾಧ್ಯಮಗಳು ನಿರಂತರವಾಗಿ ಪ್ರಚಾರ ಮಾಡುವ ಮೂಲಕ ಆಟೋಚಾಲಕರಲ್ಲಿ ಆತಂಕ ಮೂಡಿಸುತ್ತಿವೆ. ತಾವು ಕೆಲವು ವಿದ್ಯುನ್ಮಾನ ಮಾಧ್ಯಮಗಳ ಪ್ರಚೋದನೆಗೆ ಒಳಗಾಗಬೇಡಿ ಪೇಟ್ರೋಲ್, ಡೀಸೆಲ್, ಗ್ಯಾಸ್, ವಿದೇಶದಿಂದ ಬರೋದು ಇವೆಲ್ಲದರ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದಾಗಿದೆ. ಕೇಂದ್ರ ಸರ್ಕಾರ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನವನ್ನೇ ನಂಬಿ ಜೀವನ ನಡೆಸುತ್ತಿರುವ ಆಟೋಚಾಲಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಹಾಗೂ ಕೂಡಲೇ ಆಟೋಗಳಿಗೆ ಸಿಎನ್ಜಿ ಹಾಗೂ ಎಲ್ಪಿಜಿ ಇಂಧನವನ್ನು ಸಕಾಲಕ್ಕೆ ಪೂರೈಸುವ ಮೂಲಕ ಆಟೋ ಚಾಲಕರ ಹಿತ ಕಾಪಾಡುವುದು ಅಗತ್ಯ. -ಪಿ. ರಾಜು, ಅಶೋಕಪುರಂ, ಮೈಸೂರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…