ಓದುಗರ ಪತ್ರ

ಓದುಗರ ಪತ್ರ| ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಲಿ

ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಗ್ಯಾಸ್‌ ಸಿಲಿಂಡರ್ ವಿತರಿಸುವ ಜವಾಬ್ದಾರಿಯನ್ನು ಗ್ರಾಮೀಣ್‌ ವಿತರಕ್ ಕೇಂದ್ರಗಳಿಗೆ ನೀಡಲಾಗಿದೆ. ಆದರೆ ಕೆಲವು ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ ಜನರಿಗೂ ಸ್ಪಂದಿಸುತ್ತಿಲ್ಲ. ರಾವಂದೂರಿನಲ್ಲಿನ ಇಂಥ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಕಾಡುತ್ತಿದೆ.

ಇಲ್ಲಿ ಈವರೆಗೂ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆಯೇ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮೇಲಧಿಕಾರಿಗಳಿಂದ ವಿತರಣೆ ಮಾಡಲು ಯಾವುದೇ ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ ಎಂದು ಸಬೂಬು ನೀಡಿ ಜಾರಿಕೊಂಡಿದ್ದರು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ಗ್ಯಾಸ್‌ ಸಿಲಿಂಡರ್‌ ಗಳನ್ನು ವಿತರಣೆ ಮಾಡುವಂತೆ ಸೂಚಿಸಬೇಕಿದೆ.

-ಎ.ಎಸ್.ಗೋವಿಂದೇಗೌಡ, ಉಪನ್ಯಾಸಕ, ಆರೇನಹಳ್ಳಿ, ಪಿರಿಯಾಪಟ್ಟಣ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

25 mins ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

40 mins ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

53 mins ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

59 mins ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

1 hour ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

2 hours ago