ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ವಿತರಣೆ ಮಾಡುತ್ತಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಗ್ಯಾಸ್ ಸಿಲಿಂಡರ್ ವಿತರಿಸುವ ಜವಾಬ್ದಾರಿಯನ್ನು ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ನೀಡಲಾಗಿದೆ. ಆದರೆ ಕೆಲವು ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ ಜನರಿಗೂ ಸ್ಪಂದಿಸುತ್ತಿಲ್ಲ. ರಾವಂದೂರಿನಲ್ಲಿನ ಇಂಥ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಕಾಡುತ್ತಿದೆ.
ಇಲ್ಲಿ ಈವರೆಗೂ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್ಗಳನ್ನು ವಿತರಣೆಯೇ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮೇಲಧಿಕಾರಿಗಳಿಂದ ವಿತರಣೆ ಮಾಡಲು ಯಾವುದೇ ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ ಎಂದು ಸಬೂಬು ನೀಡಿ ಜಾರಿಕೊಂಡಿದ್ದರು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು ವಿತರಣೆ ಮಾಡುವಂತೆ ಸೂಚಿಸಬೇಕಿದೆ.
-ಎ.ಎಸ್.ಗೋವಿಂದೇಗೌಡ, ಉಪನ್ಯಾಸಕ, ಆರೇನಹಳ್ಳಿ, ಪಿರಿಯಾಪಟ್ಟಣ ತಾ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…