ಓದುಗರ ಪತ್ರ

ಓದುಗರ ಪತ್ರ| ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಲಿ

ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಗ್ಯಾಸ್‌ ಸಿಲಿಂಡರ್ ವಿತರಿಸುವ ಜವಾಬ್ದಾರಿಯನ್ನು ಗ್ರಾಮೀಣ್‌ ವಿತರಕ್ ಕೇಂದ್ರಗಳಿಗೆ ನೀಡಲಾಗಿದೆ. ಆದರೆ ಕೆಲವು ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ ಜನರಿಗೂ ಸ್ಪಂದಿಸುತ್ತಿಲ್ಲ. ರಾವಂದೂರಿನಲ್ಲಿನ ಇಂಥ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಕಾಡುತ್ತಿದೆ.

ಇಲ್ಲಿ ಈವರೆಗೂ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆಯೇ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮೇಲಧಿಕಾರಿಗಳಿಂದ ವಿತರಣೆ ಮಾಡಲು ಯಾವುದೇ ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ ಎಂದು ಸಬೂಬು ನೀಡಿ ಜಾರಿಕೊಂಡಿದ್ದರು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ಗ್ಯಾಸ್‌ ಸಿಲಿಂಡರ್‌ ಗಳನ್ನು ವಿತರಣೆ ಮಾಡುವಂತೆ ಸೂಚಿಸಬೇಕಿದೆ.

-ಎ.ಎಸ್.ಗೋವಿಂದೇಗೌಡ, ಉಪನ್ಯಾಸಕ, ಆರೇನಹಳ್ಳಿ, ಪಿರಿಯಾಪಟ್ಟಣ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

30 mins ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

32 mins ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

34 mins ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

36 mins ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

38 mins ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

46 mins ago