ಓದುಗರ ಪತ್ರ

ಓದುಗರ ಪತ್ರ| ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಲಿ

ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಗ್ಯಾಸ್‌ ಸಿಲಿಂಡರ್ ವಿತರಿಸುವ ಜವಾಬ್ದಾರಿಯನ್ನು ಗ್ರಾಮೀಣ್‌ ವಿತರಕ್ ಕೇಂದ್ರಗಳಿಗೆ ನೀಡಲಾಗಿದೆ. ಆದರೆ ಕೆಲವು ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ ಜನರಿಗೂ ಸ್ಪಂದಿಸುತ್ತಿಲ್ಲ. ರಾವಂದೂರಿನಲ್ಲಿನ ಇಂಥ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಕಾಡುತ್ತಿದೆ.

ಇಲ್ಲಿ ಈವರೆಗೂ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆಯೇ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮೇಲಧಿಕಾರಿಗಳಿಂದ ವಿತರಣೆ ಮಾಡಲು ಯಾವುದೇ ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ ಎಂದು ಸಬೂಬು ನೀಡಿ ಜಾರಿಕೊಂಡಿದ್ದರು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ಗ್ಯಾಸ್‌ ಸಿಲಿಂಡರ್‌ ಗಳನ್ನು ವಿತರಣೆ ಮಾಡುವಂತೆ ಸೂಚಿಸಬೇಕಿದೆ.

-ಎ.ಎಸ್.ಗೋವಿಂದೇಗೌಡ, ಉಪನ್ಯಾಸಕ, ಆರೇನಹಳ್ಳಿ, ಪಿರಿಯಾಪಟ್ಟಣ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

18 mins ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

38 mins ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

3 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

4 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

6 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

7 hours ago