ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ ಮೇಲೆಯೂ ಜಿಎಸ್ಟಿ ವಿಧಿಸಲು ಮುಂದಾಗುತ್ತಿರುವುದು ಜನರನ್ನು ಸಂಕಷ್ಟಕ್ಕೀಡು ಮಾಡಿದೆ.
ಜನಸಾಮಾನ್ಯರಿಗೆ ಜಿಎಸ್ಟಿ ಹೊರೆಯಾಗಿ ಪರಿಣಮಿಸಿದೆ ಎನ್ನುವಾಗಲೇ ಕೇಂದ್ರ ಸರ್ಕಾರ ಬೀದಿ ಬದಿ ವ್ಯಾಪಾರಿಗಳಿಗೂ ಜಿಎಸ್ಟಿ ವಿಧಿಸಲು ಮುಂದಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ತಮಿಳುನಾಡಿನಲ್ಲಿ ಪಾನಿಪುರಿ ಮಾರುವ ವ್ಯಾಪಾರಿಯೊಬ್ಬರು ಒಂದು ವರ್ಷದ ಅವಽಯಲ್ಲಿ ಯುಪಿಐ ಪೇಮೆಂಟ್ ಮೂಲಕ ೪೦ ಲಕ್ಷ ರೂ. ವ್ಯವಹಾರ ನಡೆಸಿದ್ದು, ಆ ವ್ಯಾಪಾರಿಗೂ ಈಗ ಜಿಎಸ್ಟಿ ನೋಟಿಸ್ ನೀಡಲಾಗಿದೆಯಂತೆ. ಆನ್ಲೈನ್ ಪೇಮೆಂಟ್ ವ್ಯವಸ್ಥೆ ಪಾನಿಪುರಿ ಮಾರುವವರಿಗೂ ತಮ್ಮ ವ್ಯವಹಾರ ಆಯವ್ಯಯಗಳನ್ನು ತೋರಿಸುವಂತೆ ಮಾಡಿರುವ ಜತೆಗೆ ಯುಪಿಐ ಪೇಮೆಂಟ್ ವ್ಯವಸ್ಥೆಯ ಮೂಲಕ ಕಪ್ಪು ಹಣವನ್ನು ಸುಲಭವಾಗಿ ಹುಡುಕುವುದರಲ್ಲಿ ಎಷ್ಟು ಸಹಾಯಕ ಎಂಬುದು ತಿಳಿದುಬಂದಿದೆ. ಸದ್ಯ ತಮಿಳುನಾಡಿನ ಈ ಪ್ರಕರಣ ಬೀದಿಬದಿ ವ್ಯಾಪಾರಿಗಳನ್ನೂ ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸಲು ವಿತ್ತ ಸಚಿವರು ಚಿಂತಿಸುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಬೀದಿಬದಿಯ ವ್ಯಾಪಾರಿಗಳಿಗೂ ಜಿಎಸ್ಟಿ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಬಹುದು.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…