ಓದುಗರ ಪತ್ರ

ಓದುಗರ ಪತ್ರ | ದ್ವೇಷ ಭಾಷಣ ಮಸೂದೆ: ಸ್ವಾಗತಾರ್ಹ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂ. ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಿದೆ. ಅಪರಾಧದ ಗಂಭೀರತೆಗೆ ಅನುಗುಣವಾಗಿ ಸಂತ್ರಸ್ತರಿಗೆ ಪರಿಹಾರ ನೀಡುವ ಅವಕಾಶವೂ ಇದರಲ್ಲಿರುವುದು ಸ್ವಾಗತಾರ್ಹ.

ದ್ವೇಷ ಭಾಷಣವು ವ್ಯಕ್ತಿ, ವ್ಯಕ್ತಿಗಳ ನಡುವೆ, ಜನಾಂಗ ಹಾಗೂ ಧರ್ಮ ಸಮೂಹಗಳ ಮಧ್ಯೆ ಅಸಾಮರಸ್ಯ, ಹಗೆತನ, ದ್ವೇಷ ಅಥವಾ ಕೆಡುಕಿನ ಭಾವನೆಗಳನ್ನು ಮೂಡಿಸಬಹುದು. ದ್ವೇಷ ಭಾಷಣ ಮಾಡುವ ಅಥವಾ ಪ್ರಕಟಿಸುವ, ಅಂತಹ ದ್ವೇಷ ಭಾಷಣವನ್ನು ಪ್ರಚಾರ ಮಾಡುವ, ವ್ಯಾಪಕಗೊಳಿಸುವ, ಪ್ರಚೋದಿಸುವ ಸಂದರ್ಭಗಳು ಕೂಡ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುತ್ತಿದೆ. ಆಕ್ರಮಣಕಾರಿ ದ್ವೇಷ ಭಾಷಣವು ಕೇಳುಗರಿಗೆ ನೋವುಂಟು ಮಾಡುತ್ತದೆ. ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷಕ್ಕೆ ಕಾರಣವಾಗುವ ಭಾಷಣ ಹಾಗೂ ಸಂಬಂಽತ ಅಪರಾಧಗಳ ಪ್ರಸಾರ, ಪ್ರಕಟಣೆ ಅಥವಾ ಪ್ರಚಾರವನ್ನು ತಡೆಯುವುದು ಅವಶ್ಯವಾಗಿದೆ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪ್ರತಿಯೊಂದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರವು ದ್ವೇಷ ಭಾಷಣ ಮಸೂದೆಯನ್ನು ಜಾರಿಗೆ ತರಲು ಮುಂದಾಗಿರುವುದು ಪ್ರಸಂಶನೀಯ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗಳನ್ನು ನಡೆಸಿದ ನಂತರ ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರುವುದು ಅವಶ್ಯವಾಗಿದೆ. -ಹರಳಹಳ್ಳಿಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

9 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

9 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

10 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

10 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

10 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

10 hours ago