ಓದುಗರ ಪತ್ರ

ಓದುಗರ ಪತ್ರ | ದ್ವೇಷ ಭಾಷಣ ಮಸೂದೆ: ಸ್ವಾಗತಾರ್ಹ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂ. ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಿದೆ. ಅಪರಾಧದ ಗಂಭೀರತೆಗೆ ಅನುಗುಣವಾಗಿ ಸಂತ್ರಸ್ತರಿಗೆ ಪರಿಹಾರ ನೀಡುವ ಅವಕಾಶವೂ ಇದರಲ್ಲಿರುವುದು ಸ್ವಾಗತಾರ್ಹ.

ದ್ವೇಷ ಭಾಷಣವು ವ್ಯಕ್ತಿ, ವ್ಯಕ್ತಿಗಳ ನಡುವೆ, ಜನಾಂಗ ಹಾಗೂ ಧರ್ಮ ಸಮೂಹಗಳ ಮಧ್ಯೆ ಅಸಾಮರಸ್ಯ, ಹಗೆತನ, ದ್ವೇಷ ಅಥವಾ ಕೆಡುಕಿನ ಭಾವನೆಗಳನ್ನು ಮೂಡಿಸಬಹುದು. ದ್ವೇಷ ಭಾಷಣ ಮಾಡುವ ಅಥವಾ ಪ್ರಕಟಿಸುವ, ಅಂತಹ ದ್ವೇಷ ಭಾಷಣವನ್ನು ಪ್ರಚಾರ ಮಾಡುವ, ವ್ಯಾಪಕಗೊಳಿಸುವ, ಪ್ರಚೋದಿಸುವ ಸಂದರ್ಭಗಳು ಕೂಡ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುತ್ತಿದೆ. ಆಕ್ರಮಣಕಾರಿ ದ್ವೇಷ ಭಾಷಣವು ಕೇಳುಗರಿಗೆ ನೋವುಂಟು ಮಾಡುತ್ತದೆ. ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷಕ್ಕೆ ಕಾರಣವಾಗುವ ಭಾಷಣ ಹಾಗೂ ಸಂಬಂಽತ ಅಪರಾಧಗಳ ಪ್ರಸಾರ, ಪ್ರಕಟಣೆ ಅಥವಾ ಪ್ರಚಾರವನ್ನು ತಡೆಯುವುದು ಅವಶ್ಯವಾಗಿದೆ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪ್ರತಿಯೊಂದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರವು ದ್ವೇಷ ಭಾಷಣ ಮಸೂದೆಯನ್ನು ಜಾರಿಗೆ ತರಲು ಮುಂದಾಗಿರುವುದು ಪ್ರಸಂಶನೀಯ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗಳನ್ನು ನಡೆಸಿದ ನಂತರ ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರುವುದು ಅವಶ್ಯವಾಗಿದೆ. -ಹರಳಹಳ್ಳಿಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

10 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

10 hours ago