ಓದುಗರ ಪತ್ರ

ಓದುಗರ ಪತ್ರ | ದ್ವೇಷ ಭಾಷಣ ಮಸೂದೆ: ಸ್ವಾಗತಾರ್ಹ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂ. ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಿದೆ. ಅಪರಾಧದ ಗಂಭೀರತೆಗೆ ಅನುಗುಣವಾಗಿ ಸಂತ್ರಸ್ತರಿಗೆ ಪರಿಹಾರ ನೀಡುವ ಅವಕಾಶವೂ ಇದರಲ್ಲಿರುವುದು ಸ್ವಾಗತಾರ್ಹ.

ದ್ವೇಷ ಭಾಷಣವು ವ್ಯಕ್ತಿ, ವ್ಯಕ್ತಿಗಳ ನಡುವೆ, ಜನಾಂಗ ಹಾಗೂ ಧರ್ಮ ಸಮೂಹಗಳ ಮಧ್ಯೆ ಅಸಾಮರಸ್ಯ, ಹಗೆತನ, ದ್ವೇಷ ಅಥವಾ ಕೆಡುಕಿನ ಭಾವನೆಗಳನ್ನು ಮೂಡಿಸಬಹುದು. ದ್ವೇಷ ಭಾಷಣ ಮಾಡುವ ಅಥವಾ ಪ್ರಕಟಿಸುವ, ಅಂತಹ ದ್ವೇಷ ಭಾಷಣವನ್ನು ಪ್ರಚಾರ ಮಾಡುವ, ವ್ಯಾಪಕಗೊಳಿಸುವ, ಪ್ರಚೋದಿಸುವ ಸಂದರ್ಭಗಳು ಕೂಡ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುತ್ತಿದೆ. ಆಕ್ರಮಣಕಾರಿ ದ್ವೇಷ ಭಾಷಣವು ಕೇಳುಗರಿಗೆ ನೋವುಂಟು ಮಾಡುತ್ತದೆ. ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷಕ್ಕೆ ಕಾರಣವಾಗುವ ಭಾಷಣ ಹಾಗೂ ಸಂಬಂಽತ ಅಪರಾಧಗಳ ಪ್ರಸಾರ, ಪ್ರಕಟಣೆ ಅಥವಾ ಪ್ರಚಾರವನ್ನು ತಡೆಯುವುದು ಅವಶ್ಯವಾಗಿದೆ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪ್ರತಿಯೊಂದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರವು ದ್ವೇಷ ಭಾಷಣ ಮಸೂದೆಯನ್ನು ಜಾರಿಗೆ ತರಲು ಮುಂದಾಗಿರುವುದು ಪ್ರಸಂಶನೀಯ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗಳನ್ನು ನಡೆಸಿದ ನಂತರ ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರುವುದು ಅವಶ್ಯವಾಗಿದೆ. -ಹರಳಹಳ್ಳಿಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

1 hour ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

5 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

6 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

6 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

6 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

7 hours ago