ಓದುಗರ ಪತ್ರ
ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ, ನಟ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಕಾರ್ಯಕ್ರಮ ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ.
ಇದು ಒಂದು ಜನಪ್ರಿಯ ರಿಯಾಲಿಟಿ ಷೋ ಆಗಿದ್ದು, ವಿವಿಧ ಭಾಷೆಗಳ ವಾಹಿನಿಗಳೂ ಬಿಗ್ ಬಾಸ್ ಷೋ ನಡೆಸುತ್ತಿವೆ. ಆದರೆ ಕನ್ನಡದ ಬಿಗ್ ಬಾಸ್ ಸೀಸನ್-೧೧ ಕೆಲವು ವಿವಾದಾತ್ಮಕ ವ್ಯಕ್ತಿಗಳು ಹಾಗೂ ಅವರ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದೆ.
ಈ ಕಾರ್ಯಕ್ರಮದಿಂದ ಸಮಾಜಕ್ಕೆ ಏನು ಲಾಭವಿದೆ ಎಂಬುದೇ ತಿಳಿಯುತ್ತಿಲ್ಲ. ಕಾರ್ಯಕ್ರಮದ ಗುರಿ ಏನು? ಯಾವ ಉದ್ದೇಶದ ಆಧಾರದ ಮೇಲೆ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಒಂದಿಷ್ಟೂ ಅರಿವಿಲ್ಲ. ‘ಲೋಕೋ ಭಿನ್ನ ರುಚಿ’ ಎಂಬ ಮಾತಿನಂತೆ ಕೆಲವರಿಗೆ ಈ ಕಾರ್ಯಕ್ರಮ ಇಷ್ಟವಾಗ ಬಹುದು. ಆದರೆ, ದೊಡ್ಡಮಟ್ಟದಲ್ಲಿ ಟೀಕೆಗಳು ಕೇಳಿಬರುತ್ತಿವೆ. ದೊಡ್ಡ ದೊಡ್ಡ ವಾಹಿನಿಗಳು ದೊಡ್ಡಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಅದರಿಂದ ಸಮಾಜಕ್ಕೆ ಏನಾದರೂ ಒಳಿತಾಗುವಂತಿರಬೇಕು. ಈ ಬಗ್ಗೆ ವಾಹಿನಿಯವರು ಚಿಂತಿಸಿ ಬಿಗ್ ಬಾಸ್ ಕಾರ್ಯಕ್ರಮದ ರೂಪರೇಷೆ ಬದಲಾಯಿಸಿ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗುವಂತೆ ನೋಡಿಕೊಳ್ಳಲಿ.
-ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…