ಓದುಗರ ಪತ್ರ
ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ, ನಟ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಕಾರ್ಯಕ್ರಮ ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ.
ಇದು ಒಂದು ಜನಪ್ರಿಯ ರಿಯಾಲಿಟಿ ಷೋ ಆಗಿದ್ದು, ವಿವಿಧ ಭಾಷೆಗಳ ವಾಹಿನಿಗಳೂ ಬಿಗ್ ಬಾಸ್ ಷೋ ನಡೆಸುತ್ತಿವೆ. ಆದರೆ ಕನ್ನಡದ ಬಿಗ್ ಬಾಸ್ ಸೀಸನ್-೧೧ ಕೆಲವು ವಿವಾದಾತ್ಮಕ ವ್ಯಕ್ತಿಗಳು ಹಾಗೂ ಅವರ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದೆ.
ಈ ಕಾರ್ಯಕ್ರಮದಿಂದ ಸಮಾಜಕ್ಕೆ ಏನು ಲಾಭವಿದೆ ಎಂಬುದೇ ತಿಳಿಯುತ್ತಿಲ್ಲ. ಕಾರ್ಯಕ್ರಮದ ಗುರಿ ಏನು? ಯಾವ ಉದ್ದೇಶದ ಆಧಾರದ ಮೇಲೆ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಒಂದಿಷ್ಟೂ ಅರಿವಿಲ್ಲ. ‘ಲೋಕೋ ಭಿನ್ನ ರುಚಿ’ ಎಂಬ ಮಾತಿನಂತೆ ಕೆಲವರಿಗೆ ಈ ಕಾರ್ಯಕ್ರಮ ಇಷ್ಟವಾಗ ಬಹುದು. ಆದರೆ, ದೊಡ್ಡಮಟ್ಟದಲ್ಲಿ ಟೀಕೆಗಳು ಕೇಳಿಬರುತ್ತಿವೆ. ದೊಡ್ಡ ದೊಡ್ಡ ವಾಹಿನಿಗಳು ದೊಡ್ಡಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಅದರಿಂದ ಸಮಾಜಕ್ಕೆ ಏನಾದರೂ ಒಳಿತಾಗುವಂತಿರಬೇಕು. ಈ ಬಗ್ಗೆ ವಾಹಿನಿಯವರು ಚಿಂತಿಸಿ ಬಿಗ್ ಬಾಸ್ ಕಾರ್ಯಕ್ರಮದ ರೂಪರೇಷೆ ಬದಲಾಯಿಸಿ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗುವಂತೆ ನೋಡಿಕೊಳ್ಳಲಿ.
-ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…