ಕಬ್ಬಿಣ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಕೃಷ್ಣ ಸೈಲ್ಗೆ ೭ ವರ್ಷಗಳ ಕಾಲ ಜೈಲು ಶಿಕ್ಷೆಯಾಗಿದ್ದು, ಈ ತೀರ್ಪನ್ನು ಸ್ವಾಗತಿಸಿ ಮಾತನಾಡಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಇದು ನ್ಯಾಯಾಂಗ ವ್ಯವಸ್ಥೆಗೆ ದೊರೆತ ಜಯ, ಇದರಿಂದ ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಹೆಚ್ಚಲಿದೆ, ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದಿ ದ್ದಾರೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳಿಗೂ ಶಿಕ್ಷೆಯಾಗಬೇಕು. ಇಂತಹ ಕಾನೂನು ಕ್ರಮಗಳು ಭ್ರಷ್ಟರಿಗೆ ಎಚ್ಚರಿಕೆಯ ಘಂಟೆ ಎಂಬುದು ಅವರ ಅಭಿಪ್ರಾಯವಾಗಿದೆ.
ಇತ್ತೀಚೆಗೆ ರಾಜ್ಯದಲ್ಲಿನ ಹೈ-ಪ್ರೊಫೈಲ್ ಪ್ರಕರಣಗಳಲ್ಲಿ ನ್ಯಾಯಾಲಯ ತೆಗೆದುಕೊಂಡ ನಿಲುವು ಜನರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಪ್ರಕರಣವಿರಬಹುದು, ನಟ ದರ್ಶನ್ ಮೇಲಿರುವ ಕೊಲೆ ಆರೋಪವಿರಬಹುದು, ಶಾಸಕ ಮುನಿರತ್ನ ಮೇಲೆ ಕೇಳಿಬಂದಿರುವ ಅತ್ಯಾಚಾರದ ಪ್ರಕರಣಗಳಲ್ಲಿ ನ್ಯಾಯಾಂಗ ವ್ಯವಸ್ಥೆ ತೆಗೆದುಕೊಂಡ ನಿರ್ಧಾರಗಳು ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಿದೆ. ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾದಷ್ಟೂ ಜನ ಸಾಮಾನ್ಯರು ನೆಮ್ಮದಿ ಯಿಂದ ಬದುಕಲು ಸಾಧ್ಯ. ಯಾವುದೇ ಪ್ರಕರಣವಾಗಲಿ, ಆರೋಪಿ ಎಷ್ಟೇ ಪ್ರಭಾವಿಯಾಗಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…