ಕಬ್ಬಿಣ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಕೃಷ್ಣ ಸೈಲ್ಗೆ ೭ ವರ್ಷಗಳ ಕಾಲ ಜೈಲು ಶಿಕ್ಷೆಯಾಗಿದ್ದು, ಈ ತೀರ್ಪನ್ನು ಸ್ವಾಗತಿಸಿ ಮಾತನಾಡಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಇದು ನ್ಯಾಯಾಂಗ ವ್ಯವಸ್ಥೆಗೆ ದೊರೆತ ಜಯ, ಇದರಿಂದ ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಹೆಚ್ಚಲಿದೆ, ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದಿ ದ್ದಾರೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳಿಗೂ ಶಿಕ್ಷೆಯಾಗಬೇಕು. ಇಂತಹ ಕಾನೂನು ಕ್ರಮಗಳು ಭ್ರಷ್ಟರಿಗೆ ಎಚ್ಚರಿಕೆಯ ಘಂಟೆ ಎಂಬುದು ಅವರ ಅಭಿಪ್ರಾಯವಾಗಿದೆ.
ಇತ್ತೀಚೆಗೆ ರಾಜ್ಯದಲ್ಲಿನ ಹೈ-ಪ್ರೊಫೈಲ್ ಪ್ರಕರಣಗಳಲ್ಲಿ ನ್ಯಾಯಾಲಯ ತೆಗೆದುಕೊಂಡ ನಿಲುವು ಜನರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಪ್ರಕರಣವಿರಬಹುದು, ನಟ ದರ್ಶನ್ ಮೇಲಿರುವ ಕೊಲೆ ಆರೋಪವಿರಬಹುದು, ಶಾಸಕ ಮುನಿರತ್ನ ಮೇಲೆ ಕೇಳಿಬಂದಿರುವ ಅತ್ಯಾಚಾರದ ಪ್ರಕರಣಗಳಲ್ಲಿ ನ್ಯಾಯಾಂಗ ವ್ಯವಸ್ಥೆ ತೆಗೆದುಕೊಂಡ ನಿರ್ಧಾರಗಳು ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಿದೆ. ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾದಷ್ಟೂ ಜನ ಸಾಮಾನ್ಯರು ನೆಮ್ಮದಿ ಯಿಂದ ಬದುಕಲು ಸಾಧ್ಯ. ಯಾವುದೇ ಪ್ರಕರಣವಾಗಲಿ, ಆರೋಪಿ ಎಷ್ಟೇ ಪ್ರಭಾವಿಯಾಗಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…