ಓದುಗರ ಪತ್ರ
ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.
ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು…