ಓದುಗರ ಪತ್ರ

ಓದುಗರ ಪತ್ರ | ಕತ್ತಲೆಯಲ್ಲಿ ವಾಕಿಂಗ್ ಮಾಡುವುದು ಹೇಗೆ?

ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.

ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್‌ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

3 mins ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

6 mins ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

11 mins ago

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

9 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

10 hours ago