ಓದುಗರ ಪತ್ರ
ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.
ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…