ಓದುಗರ ಪತ್ರ
ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.
ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…