ಓದುಗರ ಪತ್ರ

ಓದುಗರ ಪತ್ರ | ಕತ್ತಲೆಯಲ್ಲಿ ವಾಕಿಂಗ್ ಮಾಡುವುದು ಹೇಗೆ?

ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.

ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್‌ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago