ಓದುಗರ ಪತ್ರ
ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.
ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…