ಓದುಗರ ಪತ್ರ

ಓದುಗರ ಪತ್ರ | ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿ

ಆರೋಗ್ಯ ಇಲಾಖೆಯೊಂದಿಗೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭದಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಬಡಜನರ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಕಳೆದ ೧೫ ವರ್ಷಗಳಿಂದ ತಾಯಿ ಹಾಗೂ ಶಿಶುಗಳ ಮರಣ ಪ್ರಮಾಣ ತಗ್ಗಿದೆ, ವಿವಿಧ ಸಾಂಕ್ರಾಮಿಕ ರೋಗಗಳು ದೂರಾಗಿವೆ ಎಂದರೆ ಅದಕ್ಕೆ ಮುಖ್ಯ ಕಾರಣ ಆಶಾ ಕಾರ್ಯಕರ್ತೆಯರ ಜಾಗೃತಿ ಎಂದರೆ ತಪ್ಪಾಗಲಾರದು.

ಇದರೊಂದಿಗೆ ಗ್ರಾಮೀಣ ಭಾಗದಲ್ಲಿ ಆರೋಗ್ಯ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಇವರದು. ಇವರ ಸೇವೆಯನ್ನು ಮೆಚ್ಚಿ ಕೇಂದ್ರ ಸರ್ಕಾರ ಪ್ರಶಂಸನಾ ಪತ್ರ ನೀಡಿದೆಯೇ ವಿನಾ ಇವರಿಗೆ ಬೇಕಾದ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ಕನಿಷ್ಠ ಪಕ್ಷ ಅವರ ಸೇವೆಗೆ ತಕ್ಕಂತೆ ಪ್ರೋತ್ಸಾಹಧನವನ್ನು ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿರುವುದು ಶೋಚನೀಯ.

ಕರ್ನಾಟಕದಲ್ಲಿ ವಿಶೇಷ ಪೋರ್ಟಲ್ ಆಶಾ ನಿಧಿ ಮೂಲಕ ಆನ್‌ಲೈನ್ ಎಂಟ್ರಿ ಮಾಡಿಸಿದ್ದರೂ ಕಳೆದ ೮-೯ ವರ್ಷಗಳಿಂದ ಆಶಾ ಕಾರ್ಯಕರ್ತೆಯರು ಸರಿಯಾದ ಸಮಯಕ್ಕೆ ಪ್ರೋತ್ಸಾಹ ಧನ ಪಡೆದುಕೊಳ್ಳಲೂ ಪರದಾಡುವಂತಾಗಿದೆ. ಪರಿಣಾಮ ಇದೇ ಸಮಸ್ಯೆಯನ್ನು ಮುಂದಿಟ್ಟುಕೊಂಡು ನಿರಂತರವಾಗಿ ಹೋರಾಟ ಮಾಡುವ ಪರಿಸ್ಥಿತಿ ಇವರಿಗೆ ಎದುರಾಗಿದೆ. ಆದರೂ ಕೇಂದ್ರ, ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕಗಳ ಈಡೇರಿಕೆಯ ಕುರಿತು ಬೇಜವಾಬ್ದಾರಿ ತೋರುತ್ತಿರುವುದು ಅಮಾನವೀಯತೆಯೇ ಸರಿ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆಶಾ ಕಾರ್ಯಕರ್ತೆಯರ ನ್ಯಾಯಯುತವಾದ ಎಲ್ಲ ಬೇಡಿಕೆಗಳನ್ನು ಈಡೇರಿಸಲಿ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

1 hour ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

1 hour ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

3 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

3 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

5 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

5 hours ago