ಓದುಗರ ಪತ್ರ

ಓದುಗರ ಪತ್ರ | ವಿದ್ಯುತ್ ದೀಪಗಳನ್ನು ಅಳವಡಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ.

ನಂಜನಗೂಡಿನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಚಾಮರಾಜನಗರಕ್ಕೆ ತೆರಳುವ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೂ ಬೀದಿ ದೀಪಗಳಿಲ್ಲದ ಪರಿಣಾಮ ವಾಹನ ಸವಾರರಿಗೆ ರಾತ್ರಿಯ ವೇಳೆ ವಾಹನ ಚಲಾಯಿಸುವುದು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಹೆಚ್ಚಿನ ತಿರುವುಗಳಿರುವುದರಿಂದ ವೇಗವಾಗಿ ಬರುವ ವಾಹನಗಳಿಗೆ ಪಾದಚಾರಿಗಳು ಕಾಣದೆ ಅಪಘಾತಗಳಾಗುವ ಅಪಾಯವಿದೆ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಈ ರಸ್ತೆಯ ಮೂಲಕವೇ ಹೆಚ್ಚಿನ ಜನರು ಆಗಮಿಸುತ್ತಾರೆ. ಅದರಲ್ಲಿಯೂ ರಾತ್ರಿಯ ವೇಳೆ ಹೆಚ್ಚು ಭಕ್ತಾದಿಗಳು ಬರುತ್ತಾರೆ. ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದು ಅಪಘಾತಗಳಿಗೆ ಆಹ್ವಾನ ನೀಡಿದಂತಿದೆ. ಆದ್ದರಿಂದ ಸಂಬಂಧಪಟ್ಟ ಅಽಕಾರಿಗಳು ಈ ಬಗ್ಗೆ ಗಮನಹರಿಸಿ ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

7 mins ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

13 mins ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

1 hour ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

2 hours ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago