ಓದುಗರ ಪತ್ರ

ಓದುಗರ ಪತ್ರ | ವಿದ್ಯುತ್ ದೀಪಗಳನ್ನು ಅಳವಡಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ.

ನಂಜನಗೂಡಿನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಚಾಮರಾಜನಗರಕ್ಕೆ ತೆರಳುವ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೂ ಬೀದಿ ದೀಪಗಳಿಲ್ಲದ ಪರಿಣಾಮ ವಾಹನ ಸವಾರರಿಗೆ ರಾತ್ರಿಯ ವೇಳೆ ವಾಹನ ಚಲಾಯಿಸುವುದು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಹೆಚ್ಚಿನ ತಿರುವುಗಳಿರುವುದರಿಂದ ವೇಗವಾಗಿ ಬರುವ ವಾಹನಗಳಿಗೆ ಪಾದಚಾರಿಗಳು ಕಾಣದೆ ಅಪಘಾತಗಳಾಗುವ ಅಪಾಯವಿದೆ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಈ ರಸ್ತೆಯ ಮೂಲಕವೇ ಹೆಚ್ಚಿನ ಜನರು ಆಗಮಿಸುತ್ತಾರೆ. ಅದರಲ್ಲಿಯೂ ರಾತ್ರಿಯ ವೇಳೆ ಹೆಚ್ಚು ಭಕ್ತಾದಿಗಳು ಬರುತ್ತಾರೆ. ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದು ಅಪಘಾತಗಳಿಗೆ ಆಹ್ವಾನ ನೀಡಿದಂತಿದೆ. ಆದ್ದರಿಂದ ಸಂಬಂಧಪಟ್ಟ ಅಽಕಾರಿಗಳು ಈ ಬಗ್ಗೆ ಗಮನಹರಿಸಿ ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

8 mins ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

1 hour ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

13 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

15 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

16 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

17 hours ago