ಓದುಗರ ಪತ್ರ

ಓದುಗರ ಪತ್ರ | ವಿದ್ಯುತ್ ದೀಪಗಳನ್ನು ಅಳವಡಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ.

ನಂಜನಗೂಡಿನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಚಾಮರಾಜನಗರಕ್ಕೆ ತೆರಳುವ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೂ ಬೀದಿ ದೀಪಗಳಿಲ್ಲದ ಪರಿಣಾಮ ವಾಹನ ಸವಾರರಿಗೆ ರಾತ್ರಿಯ ವೇಳೆ ವಾಹನ ಚಲಾಯಿಸುವುದು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಹೆಚ್ಚಿನ ತಿರುವುಗಳಿರುವುದರಿಂದ ವೇಗವಾಗಿ ಬರುವ ವಾಹನಗಳಿಗೆ ಪಾದಚಾರಿಗಳು ಕಾಣದೆ ಅಪಘಾತಗಳಾಗುವ ಅಪಾಯವಿದೆ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಈ ರಸ್ತೆಯ ಮೂಲಕವೇ ಹೆಚ್ಚಿನ ಜನರು ಆಗಮಿಸುತ್ತಾರೆ. ಅದರಲ್ಲಿಯೂ ರಾತ್ರಿಯ ವೇಳೆ ಹೆಚ್ಚು ಭಕ್ತಾದಿಗಳು ಬರುತ್ತಾರೆ. ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದು ಅಪಘಾತಗಳಿಗೆ ಆಹ್ವಾನ ನೀಡಿದಂತಿದೆ. ಆದ್ದರಿಂದ ಸಂಬಂಧಪಟ್ಟ ಅಽಕಾರಿಗಳು ಈ ಬಗ್ಗೆ ಗಮನಹರಿಸಿ ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago