ಓದುಗರ ಪತ್ರ
ಮೈಸೂರಿನ ಮುಖ್ಯ ಆಡಳಿತ ಕಚೇರಿಗಳಲ್ಲಿ ಒಂದಾದ ಮಿನಿ ವಿಧಾನಸೌಧದ ಬಳಿ ವಿದ್ಯುತ್ ದೀಪಗಳಿಲ್ಲದ ಕಾರಣ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತಿದೆ.
ಮಿನಿ ವಿಧಾನಸೌಧದ ಬಳಿಯೇ ಕೃಷಿ ಇಲಾಖೆಯ ಕಚೇರಿ, ನಗರ ಭೂಮಾಪನ ಕಚೇರಿ, ಅಬಕಾರಿ ಇಲಾಖೆಯ ಕಚೇರಿಗಳಿದ್ದು, ಅನೇಕ ಕೆಲಸಗಳ ನಿಮಿತ್ತ ನಗರ ಮತ್ತು ಗ್ರಾಮೀಣ ಭಾಗದ ಜನರು ಹೆಚ್ಚಾಗಿ ಇಲ್ಲಿಗೆ ಬಂದು ಹೋಗುತ್ತಾರೆ. ಅಲ್ಲದೆ ಈ ರಸ್ತೆಯ ಮೂಲಕವೇ ಅಕ್ಕಪಕ್ಕದ ಬಡಾವಣೆಗಳ ಜನರೂ ಓಡಾಡುತ್ತಿದ್ದು, ಇಂತಹ ಜನನಿಬಿಡ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಕತ್ತಲಾದ ಮೇಲೆ ಜನರು ಓಡಾಡಲು ತೊಂದರೆಯಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಬೇಗ ಕತ್ತಲಾಗುತ್ತಿದ್ದು, ಜನರು ತಮ್ಮ ಕೆಲಸಗಳನ್ನು ಮುಗಿಸಿಕೊಂಡು ಮನೆಗೆ ಕತ್ತಲಿನಲ್ಲಿಯೇ ಹೋಗಬೇಕಾಗಿದೆ. ಸರ್ಕಾರಿ ಕಚೇರಿಗಳ ಪರಿಸ್ಥಿತಿಯೇ ಹೀಗಾದರೆ ಉಳಿದ ಭಾಗಗಳ ಅಭಿವೃದ್ಧಿ ಹೇಗೆ? ಎಂಬ ಪ್ರಶ್ನೆ ಮೂಡಿದೆ.
ಇನ್ನು ಮಿನಿ ವಿಧಾನಸೌಧದ ಹಿಂಭಾಗದ ಸರ್ಕಾರಿ ಅತಿಥಿ ಗೃಹ ಮತ್ತು ನಾಗಮ್ಮ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದು, ರಸ್ತೆಗೆ ಡಾಂಬರ್ ಹಾಕದ ಪರಿಣಾಮ ಮಣ್ಣಿನ ರಸ್ತೆಯಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಕುರಿತು ಕ್ರಮವಹಿಸಬೇಕು.
-ಎಂ.ಕೆ.ಕಿರಣ್, ಟೆಲಿಕಾಂ ಕಾಲೋನಿ, ಉದಯಗಿರಿ, ಮೈಸೂರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…