ಓದುಗರ ಪತ್ರ
ಮೈಸೂರಿನ ಮುಖ್ಯ ಆಡಳಿತ ಕಚೇರಿಗಳಲ್ಲಿ ಒಂದಾದ ಮಿನಿ ವಿಧಾನಸೌಧದ ಬಳಿ ವಿದ್ಯುತ್ ದೀಪಗಳಿಲ್ಲದ ಕಾರಣ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತಿದೆ.
ಮಿನಿ ವಿಧಾನಸೌಧದ ಬಳಿಯೇ ಕೃಷಿ ಇಲಾಖೆಯ ಕಚೇರಿ, ನಗರ ಭೂಮಾಪನ ಕಚೇರಿ, ಅಬಕಾರಿ ಇಲಾಖೆಯ ಕಚೇರಿಗಳಿದ್ದು, ಅನೇಕ ಕೆಲಸಗಳ ನಿಮಿತ್ತ ನಗರ ಮತ್ತು ಗ್ರಾಮೀಣ ಭಾಗದ ಜನರು ಹೆಚ್ಚಾಗಿ ಇಲ್ಲಿಗೆ ಬಂದು ಹೋಗುತ್ತಾರೆ. ಅಲ್ಲದೆ ಈ ರಸ್ತೆಯ ಮೂಲಕವೇ ಅಕ್ಕಪಕ್ಕದ ಬಡಾವಣೆಗಳ ಜನರೂ ಓಡಾಡುತ್ತಿದ್ದು, ಇಂತಹ ಜನನಿಬಿಡ ಪ್ರದೇಶದಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಕತ್ತಲಾದ ಮೇಲೆ ಜನರು ಓಡಾಡಲು ತೊಂದರೆಯಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಬೇಗ ಕತ್ತಲಾಗುತ್ತಿದ್ದು, ಜನರು ತಮ್ಮ ಕೆಲಸಗಳನ್ನು ಮುಗಿಸಿಕೊಂಡು ಮನೆಗೆ ಕತ್ತಲಿನಲ್ಲಿಯೇ ಹೋಗಬೇಕಾಗಿದೆ. ಸರ್ಕಾರಿ ಕಚೇರಿಗಳ ಪರಿಸ್ಥಿತಿಯೇ ಹೀಗಾದರೆ ಉಳಿದ ಭಾಗಗಳ ಅಭಿವೃದ್ಧಿ ಹೇಗೆ? ಎಂಬ ಪ್ರಶ್ನೆ ಮೂಡಿದೆ.
ಇನ್ನು ಮಿನಿ ವಿಧಾನಸೌಧದ ಹಿಂಭಾಗದ ಸರ್ಕಾರಿ ಅತಿಥಿ ಗೃಹ ಮತ್ತು ನಾಗಮ್ಮ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದು, ರಸ್ತೆಗೆ ಡಾಂಬರ್ ಹಾಕದ ಪರಿಣಾಮ ಮಣ್ಣಿನ ರಸ್ತೆಯಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಕುರಿತು ಕ್ರಮವಹಿಸಬೇಕು.
-ಎಂ.ಕೆ.ಕಿರಣ್, ಟೆಲಿಕಾಂ ಕಾಲೋನಿ, ಉದಯಗಿರಿ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…