ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ ಪರಿಶಿಷ್ಟ ಜಾತಿಯ ಸಾಧಕ ಬಾಧಕಗಳನ್ನು ಅವಲೋಕಿಸಿ ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕಾಗಿದೆ.
ರೋಸ್ಟರ್ ಬಿಂದು ವಿಚಾರದಲ್ಲಿ ಆಗುವ ಅಸಮಾನತೆಯ ಬಿಕ್ಕಟ್ಟನ್ನು ಸರಿಪಡಿಸಿ ಸಾಮಾಜಿಕ ಸಮಾನತೆಯನ್ನು ಕೂಡಿಸಬೇಕಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಒಳಮಿಸಲಾತಿ ವಿಚಾರದಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಸಮುದಾಯಗಳ ಒಗ್ಗಟ್ಟನ್ನು ಮುರಿಯುವ ಅಸ್ತ್ರವಾಗಬಾರದು. ಒಂದು ವರ್ಗಕ್ಕೆ ನ್ಯಾಯ ನೀಡುವಾಗ ಮತ್ತೊಂದು ವರ್ಗಕ್ಕೆ ಅನ್ಯಾಯವಾಗುತ್ತದೆ ಎಂಬ ಭಾವನೆ ಮೂಡದಂತೆ ಸರ್ಕಾರ ಎಚ್ಚರ ವಹಿಸಬೇಕು ಹಾಗೂ ಸಮುದಾಯಗಳ ನಡುವೆ ಒಡಕು ಮೂಡಿಸುವವರ ಬಗ್ಗೆ ಪರಿಶಿಷ್ಟ ಸಮುದಾಯದವರು ಜಾಗೃತಿ ವಹಿಸಬೇಕಾಗಿದೆ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು





