ಓದುಗರ ಪತ್ರ
ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ.
ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲೂ ಪ್ರತ್ಯೇಕತೆಯ ಮತ್ತು ವಿಭಜನೆಯ ಕೂಗು ಎದ್ದರೆ ಅದಕ್ಕೆ ಯಾರು ಹೊಣೆ? ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕು ಎಂಬ ಕೂಗು ಆಗೊಮ್ಮೆ ಈಗೊಮ್ಮೆ ಕೇಳಿಬರುತ್ತಿದ್ದು, ಇತ್ತೀಚೆಗೆ ಕರಾವಳಿ ಭಾಗದ ಶಾಸಕರೊಬ್ಬರು ಮಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸುವ ಬಗ್ಗೆ ಮಾತನಾಡಿದ್ದಾರೆ.
ಸರ್ಕಾರ ಯಾವುದೇ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳುವಾಗ ಅದರ ದೂರಗಾಮಿ ಪರಿಣಾಮದ ಬಗೆಗೆ ಯೋಚಿಸಬೇಕು. ಒಡೆದು ಆಳುವುದು ಅಥವಾ ವಿಭಜನೆ ಮಾಡುವುದು ಎಂದಿಗೂ ಮಾರಕ ಎನ್ನುವುದನ್ನು ಆಡಳಿತಾರೂಢ ಸರ್ಕಾರ ಸದಾ ನೆನಪಿನಲ್ಲಿಟ್ಟುಕೊಳ್ಳ ಬೇಕು. ಒಂದು ರೋಗಕ್ಕೆ ನೀಡುವ ಚಿಕಿತ್ಸೆ ಇನ್ನೊಂದು ಮಹಾರೋಗಕ್ಕೆ ಕಾರಣವಾಗಬಾರದು.-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…
ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…