ಓದುಗರ ಪತ್ರ
ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ.
ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲೂ ಪ್ರತ್ಯೇಕತೆಯ ಮತ್ತು ವಿಭಜನೆಯ ಕೂಗು ಎದ್ದರೆ ಅದಕ್ಕೆ ಯಾರು ಹೊಣೆ? ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕು ಎಂಬ ಕೂಗು ಆಗೊಮ್ಮೆ ಈಗೊಮ್ಮೆ ಕೇಳಿಬರುತ್ತಿದ್ದು, ಇತ್ತೀಚೆಗೆ ಕರಾವಳಿ ಭಾಗದ ಶಾಸಕರೊಬ್ಬರು ಮಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸುವ ಬಗ್ಗೆ ಮಾತನಾಡಿದ್ದಾರೆ.
ಸರ್ಕಾರ ಯಾವುದೇ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳುವಾಗ ಅದರ ದೂರಗಾಮಿ ಪರಿಣಾಮದ ಬಗೆಗೆ ಯೋಚಿಸಬೇಕು. ಒಡೆದು ಆಳುವುದು ಅಥವಾ ವಿಭಜನೆ ಮಾಡುವುದು ಎಂದಿಗೂ ಮಾರಕ ಎನ್ನುವುದನ್ನು ಆಡಳಿತಾರೂಢ ಸರ್ಕಾರ ಸದಾ ನೆನಪಿನಲ್ಲಿಟ್ಟುಕೊಳ್ಳ ಬೇಕು. ಒಂದು ರೋಗಕ್ಕೆ ನೀಡುವ ಚಿಕಿತ್ಸೆ ಇನ್ನೊಂದು ಮಹಾರೋಗಕ್ಕೆ ಕಾರಣವಾಗಬಾರದು.-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…