ಓದುಗರ ಪತ್ರ

ಓದುಗರ ಪತ್ರ | ಸಮಸ್ಯೆಗಳ ನಿವಾರಣೆಗೆ ವಿಭಜನೆ ಮದ್ದೇ?

ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ.

ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲೂ ಪ್ರತ್ಯೇಕತೆಯ ಮತ್ತು ವಿಭಜನೆಯ ಕೂಗು ಎದ್ದರೆ ಅದಕ್ಕೆ ಯಾರು ಹೊಣೆ? ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕು ಎಂಬ ಕೂಗು ಆಗೊಮ್ಮೆ ಈಗೊಮ್ಮೆ ಕೇಳಿಬರುತ್ತಿದ್ದು, ಇತ್ತೀಚೆಗೆ ಕರಾವಳಿ ಭಾಗದ ಶಾಸಕರೊಬ್ಬರು ಮಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸುವ ಬಗ್ಗೆ ಮಾತನಾಡಿದ್ದಾರೆ.

ಸರ್ಕಾರ ಯಾವುದೇ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳುವಾಗ ಅದರ ದೂರಗಾಮಿ ಪರಿಣಾಮದ ಬಗೆಗೆ ಯೋಚಿಸಬೇಕು. ಒಡೆದು ಆಳುವುದು ಅಥವಾ ವಿಭಜನೆ ಮಾಡುವುದು ಎಂದಿಗೂ ಮಾರಕ ಎನ್ನುವುದನ್ನು ಆಡಳಿತಾರೂಢ ಸರ್ಕಾರ ಸದಾ ನೆನಪಿನಲ್ಲಿಟ್ಟುಕೊಳ್ಳ ಬೇಕು. ಒಂದು ರೋಗಕ್ಕೆ ನೀಡುವ ಚಿಕಿತ್ಸೆ ಇನ್ನೊಂದು ಮಹಾರೋಗಕ್ಕೆ ಕಾರಣವಾಗಬಾರದು.-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

2 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

5 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

6 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

7 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

8 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

10 hours ago