ಓದುಗರ ಪತ್ರ

ಓದುಗರ ಪತ್ರ | ಸಮಸ್ಯೆಗಳ ನಿವಾರಣೆಗೆ ವಿಭಜನೆ ಮದ್ದೇ?

ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ.

ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲೂ ಪ್ರತ್ಯೇಕತೆಯ ಮತ್ತು ವಿಭಜನೆಯ ಕೂಗು ಎದ್ದರೆ ಅದಕ್ಕೆ ಯಾರು ಹೊಣೆ? ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕು ಎಂಬ ಕೂಗು ಆಗೊಮ್ಮೆ ಈಗೊಮ್ಮೆ ಕೇಳಿಬರುತ್ತಿದ್ದು, ಇತ್ತೀಚೆಗೆ ಕರಾವಳಿ ಭಾಗದ ಶಾಸಕರೊಬ್ಬರು ಮಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸುವ ಬಗ್ಗೆ ಮಾತನಾಡಿದ್ದಾರೆ.

ಸರ್ಕಾರ ಯಾವುದೇ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳುವಾಗ ಅದರ ದೂರಗಾಮಿ ಪರಿಣಾಮದ ಬಗೆಗೆ ಯೋಚಿಸಬೇಕು. ಒಡೆದು ಆಳುವುದು ಅಥವಾ ವಿಭಜನೆ ಮಾಡುವುದು ಎಂದಿಗೂ ಮಾರಕ ಎನ್ನುವುದನ್ನು ಆಡಳಿತಾರೂಢ ಸರ್ಕಾರ ಸದಾ ನೆನಪಿನಲ್ಲಿಟ್ಟುಕೊಳ್ಳ ಬೇಕು. ಒಂದು ರೋಗಕ್ಕೆ ನೀಡುವ ಚಿಕಿತ್ಸೆ ಇನ್ನೊಂದು ಮಹಾರೋಗಕ್ಕೆ ಕಾರಣವಾಗಬಾರದು.-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago